ಸರ್ಕಾರದಿಂದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಬಿಡುಗಡೆಯಾಗುವಂತಹ ಅನುದಾನಗಳನ್ನು ಸಮರ್ಪಕವಾಗಿ ಸದುಪಯೋಗ ಪಡಿಸಿಕೊಂಡು ಹಳ್ಳಿಗಳಲ್ಲಿ ಸ್ವಚ್ಚತೆ ಕಾಪಾಡಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಗಂಗನಹಳ್ಳಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಡಿ ಎಸ್.ಸಿ.ಪಿ.ಯೋಜನೆಯಲ್ಲಿ ಮಂಗಳವಾರ ೬ ಲಕ್ಷ ವೆಚ್ಚದಲ್ಲಿ ಸಿ.ಸಿ. ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದ ಜನರು ವಾಸಮಾಡುತ್ತಿರುವ ಕಡೆಗಳಲ್ಲಿ ಸ್ವಚ್ಚತೆಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು. ಮೂಲ ಸೌಕರ್ಯಗಳಾದ ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿ ದೀಪಗಳನ್ನು ಕೊಡುವುದು ಹಾಗೂ ಸ್ವಚ್ಚತೆಗೆ ಆದ್ಯತೆ ನೀಡಿ ಸಾಮಾನ್ಯ ಜನರ ಆರೋಗ್ಯ ರಕ್ಷಣೆಗೆ ಹೆಚ್ಚು ಒತ್ತು ನೀಡುವಂತಹ ಹೊಣೆಗಾರಿಕೆ ಸರ್ಕಾರದ ಮೇಲಿದೆ. ಕಾಮಗಾರಿಗಳನ್ನು ಮಾಡುತ್ತಿರುವ ಗುತ್ತಿಗೆದಾರರು, ನಿಗದಿತ ಸಮಯದಲ್ಲಿ ಗುಣಮಟ್ಟದ ಕಾಮಗಾರಿಗಳನ್ನು ಮಾಡುವ ಮೂಲಕ ಯೋಜನೆಯನ್ನು ಸಾಕಾರಗೊಳಿಸಬೇಕು. ನಾಗರಿಕರು ಸಹಕಾರ ನೀಡಬೇಕು ಎಂದರು.
ಮುಖಂಡರಾದ ಜಿ.ಎಂ.ರಾಮಾಂಜಿನಪ್ಪ, ರಾಮಣ್ಣ, ವಿ.ಕೆಂಪಯ್ಯ ಜಿ.ಎಂ.ನಾರಾಯಣಪ್ಪ, ನಾರಾಯಣಸ್ವಾಮಿ, ಗುತ್ತಿಗೆದಾರ ಡಿ.ಕೃಷ್ಣ, ಮುನಿಬಚ್ಚಪ್ಪ, ಸೊಣ್ಣೇನಹಳ್ಳಿ ಮುನಿರಾಜು, ದ್ಯಾವಪ್ಪ, ಮುತ್ತೂರು ರವಿ, ಮನೋಜ್ ಹಾಜರಿದ್ದರು.
- Advertisement -
- Advertisement -
- Advertisement -
- Advertisement -