13.1 C
Sidlaghatta
Sunday, December 14, 2025

ಹಳ್ಳಿಹಳ್ಳಿಗೂ ಕೊರೊನಾ ಕುರಿತ ಮಾಹಿತಿ ಪ್ರಚಾರ

- Advertisement -
- Advertisement -

ರೇಷ್ಮೆ ಬೆಳೆಗಾರರ ಹಿತರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಮಳ್ಳೂರು ಹರೀಶ್ ಅವರು ಕೊರೊನಾ ಕಾಯಿಲೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದಕ್ಕಾಗಿ ಧ್ವನಿವರ್ಧಕವನ್ನು ಅಳವಡಿಸಿ ತಮ್ಮ ಸ್ವಂತ ವಾಹನವನ್ನು ತಾಲ್ಲೂಕಿನಾದ್ಯಂತ ಪ್ರಚಾರ ಕಾರ್ಯಕ್ಕೆ ನಿಯೋಜಿಸಿದ್ದಾರೆ.
“ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಲ್ಲಿ ಮನವಿ ಮಾಡಿ, ಕೊರೊನಾ ಸೋಂಕು ಜಿಲ್ಲೆಯಲ್ಲಿ ಕಂಡು ಬಂದ ಪರಿಣಾಮವಾಗಿ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಧ್ವನಿವರ್ಧಕದ ಮೂಲಕ ಪ್ರಚಾರ ಮಾಡಲು ಅನುಮತಿ ಕೋರಿದೆ. ಅವನು ಅನುಮತಿ ಕೊಟ್ಟ ಮೇಲೆ ಹಳ್ಳಿಹಳ್ಳಿಗೂ ಕೊರೊನಾ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ವಿವರಿಸಲಾಗುತ್ತಿದೆ” ಎಂದು ಮಳ್ಳೂರು ಹರೀಶ್ ತಿಳಿಸಿದರು.
“ಬದುಕಿದ್ದರೆ, ಬದುಕು”, “ಎಚ್ಚರಿಕೆಯಿಂದಿರಿ, ಸುರಕ್ಷಿತವಾಗಿರಿ” ಎಂದು ಹೇಳುತ್ತಾ ಜನರು ಕೊರೊನಾ ಕುರಿತಂತೆ ಮುಂಜಾಗ್ರತೆಗೆ ಸರಳ ಸೂತ್ರಗಳನ್ನು ತಿಳಿಸಿದ್ದೇವೆ. ಕೊರೊನಾ ಸೋಂಕಿನ ಲಕ್ಷಣಗಳು, ಅದು ಹರಡುವ ಬಗೆ, ಅದಕ್ಕಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ದ್ವನಿವರ್ಧಕದ ಮೂಲಕ ತಿಳಿಸಲಾಗುತ್ತಿದೆ. ಪ್ರತಿಯೊಂದು ಹಳ್ಳಿಗಳಿಗೂ ವಾಹನ ಸಂಚರಿಸಿ ಜನರಿಗೆ ಮಾಹಿತಿ ನೀಡಲಾಗುತ್ತಿದೆ. ಸೋಪು ಬಳಸಿ ಕೈತೊಳೆದುಕೊಳ್ಳುತ್ತಿರಿ, ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ಪ್ರತಿಯೊಬ್ಬರಿಗೂ ತಿಳಿಸುವುದು ನಮ್ಮ ಉದ್ದೇಶ. ಶಾಶ್ವತ ನೀರಾವರಿ ಹೋರಾಟ ಸಮಿತಿ, ಯುವಶಕ್ತಿ ಸಹ ಇದಕ್ಕೆ ಸಹಕರಿಸಿದೆ” ಎಂದು ಅವರು ವಿವರಿಸಿದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!