ಹಿಂದುಳಿದ ಪ್ರದೇಶದಲ್ಲಿ ಶಿಕ್ಷಣ ನೀಡಬೇಲು

0
462

ಅತಿ ಹಿಂದುಳಿದ ಕೂಲಿ ಕಾರ್ಮಿಕರೆ ವಾಸಿಸುವ ನಗರದ ಹಿಂದುಳಿದ ಪ್ರದೇಶದಲ್ಲಿ ಶಾಲೆಯನ್ನು ನಡೆಸುತ್ತಾ ಮಕ್ಕಳಿಗೆ ಉತ್ತಮ ಶೀಕ್ಷಣ ನೀಡುತ್ತಿರುವುದು ಅಭಿನಂದನೀಯ ಎಂದು ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ ತಿಳಿಸಿದರು.
ನಗರದ ಗಾಂಧಿನಗರದಲ್ಲಿ ಶನಿವಾರ ವಿಸ್ಡಮ್ ಕಿರಿಯ ಪ್ರಾಥಮಿಕ ಶಾಲೆಯ ಒಂಭತ್ತನೇ ಶಾಲಾ ವಾರ್ಪಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಕ್ರೀಡೆಯಲ್ಲಿ ಭಾಗವಹಿಸಬೇಕು. ವಿದ್ಯಾರ್ಥಿಗಳಿಗೆ ಮನೋಸ್ಥೈರ್ಯವನ್ನು ನೀಡಿ, ಪ್ರೋತ್ಸಾಹಿಸಲು ಪ್ರಶಸ್ತಿ ಪತ್ರಗಳನ್ನು ನೀಡುವ ಮೂಲಕ ಅವರಲ್ಲಿ ಅಡಗೀರುವ ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರರ್ದಶಿಸುವ ವೇದಿಕೆ ಶಾಲಾ ವಾರ್ಷಿಕೋತ್ಸವ ಆಗಿರುತ್ತದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆ ಗಮನ ಹರಿಸಿ ಶಿಕ್ಷಕರು ನೀಡಿದ ಪಾಠ ಪ್ರವಚನಗಳನ್ನು ಕಲಿತು ಉನ್ನತ ವಿದ್ಯಾಭ್ಯಾಸವನ್ನು ಮಾಡಿ ಪೋಷಕರಿಗೆ ಹಾಗೂ ದೇಶಕ್ಕೆ ಕೀರ್ತಿ ತರುವಂತಹ ಪ್ರಜೆಗಳಾಗಬೇಕೆಂದು ಕೋರಿದರು.
ವಿಸ್ಡಮ್ ಶಾಲೆಯ ಅಧ್ಯಕ್ಷ ನಾಗರಾಜ್, ಕಾರ್ಯನಿರ್ವಾಹಕ ಅಧಿಕಾರಿ ಎಂ.ವೆಂಕಟೇಶ್, ಬಿ.ಆರ್.ರಾಮಚಂದ್ರ, ತನ್ವೀರ್ ಪಾಷ, ಮುನಿಯಪ್ಪ, ಮುಖ್ಯ ಶಿಕ್ಷಕಿ ಟಿ.ಎ.ಮಾಲಾ ಮತ್ತು ಶಾಲಾ ಶಿಕ್ಷಕರು, ಪೋಷಕರು ಹಾಜರಿದ್ದರು.

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!