Home News ಹಿತ್ತಲಹಳ್ಳಿ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮ

ಹಿತ್ತಲಹಳ್ಳಿ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮ

0

ಶಿಡ್ಲಘಟ್ಟ ತಾಲ್ಲೂಕಿನ ಹಿತ್ತಲಹಳ್ಳಿ ಗ್ರಾಮದ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಒಂದು ಲಕ್ಷ ರೂಪಾಯಿ ಸಹಾಯಧನವನ್ನು ನೀಡಿದ್ದು ಬುಧವಾರ ಜಿಲ್ಲೆಯ ನಿರ್ದೇಶಕ ರಾಧಾಕೃಷ್ಣ ಮತ್ತು ತಾಲ್ಲೂಕಿನ ಯೋಜನಾಧಿಕಾರಿ ಬಿ.ಆರ್ ಯೋಗೀಶ್‌ ದೇವಸ್ಥಾನದ ಮುಖ್ಯಸ್ಥರಿಗೆ ಡಿ.ಡಿ ಯನ್ನು ಹಸ್ತಾಂತರಿಸಿದರು. ದೇವಾಲಯದ ಅಧ್ಯಕ್ಷರಾದ ಎಚ್.ಎಂ ಕೃಷ್ಣಪ್ಪ. ಮುಖಂಡರಾದ ಎಚ್.ಸಿ ರಮೇಶ್, ಎಚ್.ಎಂ ಮುನಿರಾಜು, ಎಚ್.ಕೆ.ಸುರೇಶ್, ನಾಗರಾಜು, ಕದಿರಪ್ಪ ಹಾಜರಿದ್ದರು.

error: Content is protected !!