25.1 C
Sidlaghatta
Wednesday, January 14, 2026

ಹಿರಿಯ ಕಾಂಗ್ರೆಸ್‌ ಮುಖಂಡ ಬಿ.ಕೆ.ನಾರಾಯಣಸ್ವಾಮಿ ನಿಧನ

- Advertisement -
- Advertisement -

ತಾಲ್ಲೂಕಿನ ಹಿರಿಯ ಕಾಂಗ್ರೆಸ್‌ ಮುಖಂಡರಲ್ಲೊಬ್ಬರಾದ ಹಂಡಿಗನಾಳದ ಬಿ.ಕೆ.ನಾರಾಯಣಸ್ವಾಮಿ(94) ತಮ್ಮ ಸ್ವಗೃಹದಲ್ಲಿ ಶನಿವಾರ ನಿಧನರಾಗಿದ್ದಾರೆ. ವಯೋಸಹಜ ಕಾರಣದಿಂದ ಅವರು ಅಸ್ವಸ್ಥರಾಗಿದ್ದರು. ರಾವ್‌ ಬಹಾದ್ದೂರ್‌ ಬಿ.ಕೆ.ನಾರಾಯಣಸ್ವಾಮಿ ಅವರು ಮಾಜಿ ತಾಲ್ಲೂಕು ಸಮಿತಿ ಸದಸ್ಯರು, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಆಗಿದ್ದು, ತಾಲ್ಲೂಕಿನಲ್ಲಿ ಕಾಂಗ್ರೆಸ್‌ ಪಕ್ಷದ ಬೆಳವಣಿಗೆಗೆ ಅಪಾರವಾಗಿ ಶ್ರಮಿಸಿದ್ದರು.
ಅವರು ನಾಲ್ವರು ಗಂಡು ಮಕ್ಕಳು, ಮೂವರು ಹೆಣ್ಣು ಮಕ್ಕಳು, 26 ಮಂದಿ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಸೇರಿದಂತೆ ತಾಲ್ಲೂಕಿನ ಕಾಂಗ್ರೆಸ್‌ ಮುಖಂಡರು ಭೇಟಿ ನೀಡಿ ಮೃತ ಆತ್ಮಕ್ಕೆ ಶಾಂತಿಯನ್ನು ಕೋರಿದರು.
ಮೃತರ ಅಂತ್ಯಕ್ರಿಯೆಯನ್ನು ಅವರ ತೋಟದಲ್ಲಿರುವ ಸಂಪಿಗೆ ವನದಲ್ಲಿ ಭಾನುವಾರ ನೆರವೇರಿಸಲಾಗುವುದೆಂದು ಅವರ ಸಂಬಂಧಿಕರು ತಿಳಿಸಿದ್ದಾರೆ.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!