Home News ಹುಜುಗೂರು ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬದ ಆಚರಣೆ

ಹುಜುಗೂರು ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬದ ಆಚರಣೆ

0

ಕ್ರಿಸ್ತ ಯೇಸುವಿನ ಭೋದನೆಗಳು ಸಾರ್ವಕಾಲಿಕವಾಗಿದ್ದು, ಎಲ್ಲಾ ಕಾಲಘಟ್ಟಗಳಿಗೂ ಅನ್ವಯಿಸುವಂತಹ ಸತ್ಯ ಬೋದನೆಗಳನ್ನು ಅನುಸರಿಸುವುದರಿಂದ ಮಾನಸಿಕ ನೆಮ್ಮದಿ ದೊರೆಯುತ್ತದೆ ಎಂದು ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ಹೇಳಿದರು.
ತಾಲ್ಲೂಕಿನ ಹುಜುಗೂರು ಗ್ರಾಮದಲ್ಲಿ ಇಮ್ಮಾನುವೆಲ್ ಚಾರಿಟೆಬಲ್ ಟ್ರಸ್ಟಿನಿಂದ ಮಂಗಳವಾರ ಆಯೋಜನೆ ಮಾಡಲಾಗಿದ್ದ ಕ್ರಿಸ್ಮಸ್ ಹಬ್ಬದ ಆಚರಣೆಯಲ್ಲಿ ಅವರು ಮಾತನಾಡಿದರು.
ಧಾರ್ಮಿಕವಾದ ಕಾರ್ಯಕ್ರಮಗಳನ್ನು ಮಾಡುವುದರಿಂದ ಪ್ರತಿಯೊಂದು ಹಳ್ಳಿಗಳಲ್ಲಿಯೂ ಶಾಂತಿ, ಐಕ್ಯತೆ, ನೆಲೆಸಲು ಸಾಧ್ಯವಾಗುತ್ತದೆ, ಪ್ರತಿಯೊಬ್ಬ ಮುನುಷ್ಯನೂ ಕೂಡಾ ಯಾವುದೇ ಧರ್ಮದಲ್ಲಿದ್ದರೂ ಸಮಾಜದಲ್ಲಿನ ಬಡವರ್ಗದ ಜನತೆಯ ಹಿತವನ್ನು ಬಯಸಬೇಕು, ಅವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸಬೇಕು, ದೀನರನ್ನು ಪ್ರೀತಿಸುವಂತಹ ಕೆಲಸ ಮಾಡಬೇಕು, ಎಲ್ಲಾ ವರ್ಗದ ಜನತೆಗೂ ಕೂಡಾ ಗುಣಮಟ್ಟದ ಶಿಕ್ಷಣವನ್ನು ನೀಡಿ ಅವರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ದಿ ಕಾಣುವಂತೆ ಪ್ರೋತ್ಸಾಹ ಮಾಡಿದಾಗ ಮಾತ್ರ ಹಬ್ಬದ ಆಚರಣೆಗಳು ಅರ್ಥಪೂರ್ಣವಾಗುತ್ತವೆ ಎಂದರು.
ಜಿಲ್ಲಾ ಪಂಚಾಯತಿ ಸದಸ್ಯೆ ಶಿವಲೀಲಾರಾಜಣ್ಣ ಮಾತನಾಡಿ, ಯೇಸುಕ್ರಿಸ್ತನು ಮಾನವಕುಲಕ್ಕೆ ನೀಡಿದಂತಹ ಶಾಂತಿಯ ಸಂದೇಶಗಳನ್ನು ಪ್ರತಿಯೊಬ್ಬ ಮನುಷ್ಯನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಪಾಪರಹಿತವಾದ ಜೀವಿತವನ್ನು ಜೀವಿಸಿದಾಗ ಮಾನವನಿಗೆ ಮುಕ್ತಿದೊರೆಯುತ್ತದೆ ಈ ನಿಟ್ಟಿನಲ್ಲಿ ಒತ್ತಡದ ಜೀವನದ ನಡುವೆಯೂ ಇಂತಹ ಧಾರ್ಮಿಕವಾದ ಕಾರ್ಯಗಳಿಂದ ರೋಗಮುಕ್ತ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದರು.
ಈ ಸಂಧರ್ಭದಲ್ಲಿ ಟ್ರಸ್ಟಿನ ವತಿಯಿಂದ ಬಡವರಿಗೆ ಬಟ್ಟೆಗಳನ್ನು ದಾನಮಾಡಲಾಯಿತು.
ಬೆಂಗಳೂರು ಉತ್ತರ ಜಿಲ್ಲಾ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಹೂಡಿ ನಾಗರಾಜ್,
ಜಿಲ್ಲಾ ಯೂನಿಯನ್ ನಿರ್ದೇಶಕ ತಾದೂರು ರಮೇಶ್, ಹುಜುಗೂರು ಗ್ರಾಮದ ರಾಮಚಂದ್ರಪ್ಪ, ರಾಮಪ್ಪ, ಎಚ್.ಸಿ.ಸಿದ್ದಪ್ಪ, ಮುನಿರೆಡ್ಡಿ, ಸೋಮಶೇಖರ್, ಟ್ರಸ್ಟಿನ ಕಾರ್ಯದರ್ಶಿ ಮಂಜುನಾಥ್, ಸಹಕಾರ್ಯದರ್ಶಿ ಎನ್.ನಾರಾಯಣಸ್ವಾಮಿ, ಖಜಾಂಚಿ ಶಾಮಣ್ಣ, ನಿರ್ದೇಶಕರಾದ ಗೋವಿಂದಪ್ಪ, ಹರೀಶ್, ಎಚ್.ಎನ್.ಮುನಿನಾರಾಯಣ, ಮುನೀಂದ್ರ, ಮುನಿಕೃಷ್ಣಪ್ಪ, ಮುನಿನಾರಾಯಣ, ಜಿ.ಎನ್.ಚೌಡಪ್ಪ, ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.