28.1 C
Sidlaghatta
Wednesday, February 18, 2026

ಹುತಾತ್ಮ ಯೋಧರ ಬಲಿದಾನಕ್ಕೆ ಮೌನಾಚರಣೆ

- Advertisement -
- Advertisement -

“ಜಮ್ಮು ಕಾಶ್ಮೀರದ ಅನಂತಪುರದಲ್ಲಿ ಉಗ್ರರ ಆತ್ಮಹತ್ಯಾ ದಾಳಿಯಲ್ಲಿ ೪೪ ಮಂದಿ ಯೋಧರು ಪ್ರಾಣಾರ್ಪಣೆ ಮಾಡಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಶಾಲಾ ಮಕ್ಕಳಿಗೆ ದೇಶಸೇವೆ, ಸೈನಿಕರ ವಿಚಾರ ಹಾಗೂ ಈ ದುರ್ಘಟನೆಯಲ್ಲಿ ನಮ್ಮ ರಾಜ್ಯದ ಮಂಡ್ಯ ಜಿಲ್ಲೆಯ ಗುರು ಎಂಬ ಯೋಧ ಕೂಡ ವೀರಮರಣವನ್ನಪ್ಪಿರುವ ವಿಚಾರವನ್ನು ತಿಳಿಸಿದೆವು. ಯೋಧರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ನಡೆಸಿದೆವು” ಎಂದು ಮುಖ್ಯ ಶಿಕ್ಷಕಿ ಎಂ.ವಿ.ವೆಂಕಟರತ್ನಮ್ಮ ತಿಳಿಸಿದರು.
ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹುತಾತ್ಮ ಯೋಧರ ಬಲಿದಾನಕ್ಕೆ ಮೌನಾಚರಣೆ ಮೂಲಕ ಗೌರವ ಸಲ್ಲಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿ ಸದಸ್ಯ ಎ.ಎಂ.ತ್ಯಾಗರಾಜ್, ಶಿಕ್ಷಕರಾದ ಎಸ್.ಚಾಂದ್ ಪಾಷ, ಎಂ.ಎಂ.ಅಶೋಕ್, ಎಂ.ಭಾರತಿ ಸಿಬ್ಬಂದಿ ವೆಂಕಟಮ್ಮ, ಹನುಮಂತರೆಡ್ಡಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!