ಚಿಕ್ಕಬಳ್ಳಾಪುರ-–ಕೋಲಾರ ಮಾರ್ಗದಲ್ಲಿ ರೈಲು ಸಂಚಾರವನ್ನು ಹೆಚ್ಚಿಬೇಕೆಂದು ಸರ್ಕಾರಿ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ನಗರದಲ್ಲಿ ಸಭೆ ಸೇರಿದ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು, ಚಿಕ್ಕಬಳ್ಳಾಪುರ -ಕೋಲಾರ ಮಾರ್ಗದಲ್ಲಿ ಇದೀಗ ಕೇವಲ ಒಂದು ಬಾರಿ ಮಾತ್ರವೇ ರೈಲು ಸಂಚಾರವಿದ್ದು ಇನ್ನಷ್ಟು ರೈಲು ಸಂಚಾರವನ್ನು ಹೆಚ್ಚಿಸಲು ಸಂಬಂಧಿಸಿದ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯಲು ತೀರ್ಮಾನಿಸಲಾಯಿತು.
ರೈಲ್ವೆ ನಿಲ್ದಾಣದಲ್ಲಿ ಕಾಡುತ್ತಿರುವ ಮೂಲ ಸೌಕರ್ಯಗಳ ಕೊರತೆ, ರೈಲು ಸಂಚಾರದ ಕೊರತೆ, ಬೆಳಗಿನ ವೇಳೆ ಬೆಂಗಳೂರು ಕಡೆಗೆ ರೈಲು ಸಂಚಾರವಿಲ್ಲದಿರುವುದು ಸೇರಿದಂತೆ ಹಲವಾರು ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ನಂತರ ರೈಲ್ವೆ ನಿಲ್ದಾಣಕ್ಕೆ ತೆರಳಿ ಅಲ್ಲಿ ಪ್ರಯಾಣಿಕರಿಗೆ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ, ಸ್ವಚ್ಛತೆ, ನೈರ್ಮಲ್ಯ ಇನ್ನಿತರೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.
ರೈಲಿನ ಸಮಯ ಯಾವ ಪ್ರಯಾಣಿಕರಿಗೂ ಅನುಕೂಲವಾಗುತ್ತಿಲ್ಲ. ಇತರೆ ನಗರಗಳಿಗೆ ತೆರಳುವ ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಖಾಸಗಿ ಕ್ಷೇತ್ರದ ನೌಕರರು, ವರ್ತಕರು ಸೇರಿದಂತೆ ಯಾವುದೆ ವಿದವಾದ ಪ್ರಯಾಣಿಕರಿಗೂ ಈ ಸಮಯ ಸರಿಹೋಗುತ್ತಿಲ್ಲ. ಹಾಗಾಗಿ ಈ ಸಮಯವನ್ನು ಬದಲಿಸಿ ಪ್ರಯಾಣಿಕರಿಗೆ ಅನುಕೂಲ ಆಗುವಂತೆ ಹೆಚ್ಚಿನ ರೈಲುಗಳನ್ನು ಓಡಿಸಬೇಕಿದೆ. ಹಾಗೆಯೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆಂದು ನಿರ್ಮಿಸಿರುವ ಶೌಚಾಲಯದ ನಿರ್ವಹಣೆ ಸೂಕ್ತವಾಗಿಲ್ಲ. ಕುಡಿಯುವ ನೀರಿನ ಸೌಲಭ್ಯವಿಲ್ಲ. ಸಂಜೆ ನಂತರ ನಿಲ್ದಾಣದಲ್ಲಿ ಬೆಳಕಿನ ವ್ಯವಸ್ಥೆಯಿಲ್ಲ. ರಾತ್ರಿವೇಳೆ ಕಾವಲುಗಾರರೂ ಇಲ್ಲ. ಹಾಗಾಗಿ ಲಕ್ಷಾಂತರ ರೂಪಾಯಿಯ ಆಸ್ತಿಪಾಸ್ತಿ ಕಳ್ಳಕಾಕರ ಪಾಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಕೂಡಲೆ ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಿ ಇಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು, ರೈಲು ಸಂಚಾರದ ಸಮಯವನ್ನು ಪ್ರಯಾಣಿಕರಿಗೆ ಅನುಕೂಲವಾಉವ ಸಮಯಕ್ಕೆ ಬದಲಿಸುವುದರ ಜತೆಗೆ ಹೆಚ್ಚಿನ ಸಂಚಾರವನ್ನು ಆರಂಭಿಸಬೇಕಿದೆ ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು.
ಸಂಘದ ಅಧ್ಯಕ್ಷ ಎಂ.ಮುನಿಗುರ್ರಪ್ಪ, ಕಾರ್ಯದರ್ಶಿ ಎಸ್.ಎನ್.ಸತ್ಯನಾರಾಯಣಶೆಟ್ಟಿ, ಖಜಾಂಚಿ ಎಂ.ಶೀನಿವಾಸ್, ಸಂಘಟನಾ ಕಾರ್ಯದರ್ಶಿ ಡಿ.ಆರ್.ನರಸಿಂಹರಾಜು, ನಿರ್ದೆಶಕ ಬಿ.ಕೆ.ಮುನಿರತ್ನಮಾಚಾರಿ, ಎಂ.ಕೃಷ್ಣಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
- Advertisement -
- Advertisement -
- Advertisement -
- Advertisement -