20.6 C
Sidlaghatta
Tuesday, July 15, 2025

ಹೈನುಗಾರಿಕೆಯಿಂದ ಜೀವನಮಟ್ಟ ಸುಧಾರಣೆ

- Advertisement -
- Advertisement -

ಜಿಲ್ಲೆಯ ರೈತರ ಜೀವನಮಟ್ಟ ಸುಧಾರಣೆಗೆ ಈ ಭಾಗದ ಹೈನುಗಾರಿಕೆ ಬಹುತೇಕ ಕಾರಣವಾಗಿದೆ ಎಂದು ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ಹೇಳಿದರು.
ತಾಲ್ಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಗುರುವಾರ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಕಳೆದ ಮೂರು ದಶಕಗಳ ಹಿಂದೆ ಈ ಭಾಗದ ರೈತರ ಉಪಕಸುಬಾಗಿದ್ದ ಹೈನುಗಾರಿಕೆ ಇದೀಗ ಮುಖ್ಯ ಕಸುಬಾಗಿದೆ. ಇದಕ್ಕೆ ಕಾರಣ ಅವಿಭಾಜಿತ ಜಿಲ್ಲಯಲ್ಲಿ ಇಂದು ಕುಡಿಯುವ ನೀರಿಗೂ ಪರಿತಪಿಸುವ ವಾತಾವರಣ ನಿರ್ಮಾಣವಾಗಿದ್ದು ರೈತರು ಕೃಷಿ ಮಾಡಲಾಗುತ್ತಿಲ್ಲ. ಬಹುತೇಕ ರೈತರು ಮನೆಯಲ್ಲಿ ಒಂದೆರಡು ಹಸುಗಳನ್ನು ಸಾಕಿ ಹಾಲು ಉತ್ಪಾದಿಸಿ ಜೀವನ ನಡೆಸುವಂತಾಗಿದೆ ಎಂದರು.
ಕುಡಿಯುವ ನೀರಿಗೂ ಪರದಾಡುವ ಸ್ಥಿತಿಯಿದ್ದರೂ ಈ ಭಾಗದ ರೈತರು ಅದರಲ್ಲಿಯೂ ಮಾತೆಯರು ಹಾಲಿನ ಉತ್ಪಾದನೆಯಲ್ಲಿ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದು, ಹಾಲು ಉತ್ಪಾದಕರು ಗುಣಮಟ್ಟದ ಹಾಲು ಪೂರೈಸುವುದರೊಂದಿಗೆ ಒಕ್ಕೂಟದಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದರು.
ರಾಸುಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸುವುದು ಸೇರಿದಂತೆ ಕಾಲ ಕಾಲಕ್ಕೆ ರಾಸುಗಳಿಗೆ ಲಸಿಕೆ ಹಾಕಿಸುವುದು ಹಾಗು ಒಕ್ಕೂಟದಿಂದ ಸಿಗುವ ವಿವಿಧ ಸವಲತ್ತುಗಳನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದರು.
ಈ ಸಂದರ್ಭದಲ್ಲಿ ಕೋಚಿಮುಲ್ ಶಿಬಿರ ಘಟಕದ ಉಪ ವ್ಯವಸ್ಥಾಪಕ ಹನುಮಂತರಾವ್, ವಿಸ್ತರಣಾಧಿಕಾರಿ ಶ್ರೀನಿವಾಸ್, ಅಧ್ಯಕ್ಷ ದೇವರಾಜ್ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!