ಬಯಲುಸೀಮೆ ಭಾಗದಲ್ಲಿ ರೈತರು ಇಂದಿಗೂ ಜೀವಂತವಾಗಿದ್ದಾರೆ ಎಂದರೆ ಅದು ಈ ಬಾಗದ ಹೈನುಗಾರಿಕೆ ಹಾಗು ರೇಷ್ಮೆ ಕೃಷಿಯಿಂದ ಮಾತ್ರ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ವಾಸವಿ ಕಲ್ಯಾಣಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಇವರ ಸಹಯೋಗದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಕೃಷಿ ಮತ್ತು ಸಹಕಾರ ಸಾಹಿತ್ಯ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರೈತನಿಗೆ ತಾನು ಬೆಳೆದ ಬೇರೆ ಯಾವುದೇ ಬೆಳೆಗೆ ವೈಜ್ಞಾನಿಕ ಬೆಲೆ ಸಿಗದೇ ಇದ್ದರೂ ಹಾಲು ಉತ್ಪಾದನೆಯಿಂದ ರೈತರಿಗೆ ಒಂದಷ್ಟು ಅನುಕೂಲವಾಗುತ್ತಿದೆ ಎಂದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಡಾ.ಶೇಖರಗೌಡ ಮಾಲಿಪಾಟೀಲ ಮಾತನಾಡಿ, ವಿಶ್ವದಲ್ಲಿಯೇ ಶೇ. ೮೦ ರಷ್ಟು ಕೃಷಿ ಆಧಾರಿತವಾಗಿರುವ ನಮ್ಮ ದೇಶದಲ್ಲಿ ಜನಸಂಖ್ಯೆಗನುಗುಣವಾಗಿ ಆಹಾರ ಉತ್ಪಾದನೆಯಾಗುತ್ತಿದೆಯಾದರೂ ಅನ್ನದಾತ ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಸಿಗದೇ ಪರದಾಡುವಂತಾಗಿದೆ. ಇನ್ನು ಬಯಲುಸೀಮೆ ಬಾಗದಲ್ಲಿ ಕುಡಿಯುವ ನೀರಿಗೂ ಪರಿತಪಿಸುತ್ತಿದ್ದು ಈ ಬಾಗದ ರೈತ ಇರುವ ನೀರಿನಲ್ಲಿಯೇ ದೇಶಕ್ಕೆ ಬೇಕಾದ ಹಣ್ಣು ತರಕಾರಿ ಸೇರಿದಂತೆ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದರು.
ಸಮಾವೇಶದಲ್ಲಿ ಸಮಗ್ರ ಕೃಷಿಯ ಬಗ್ಗೆ ಏರ್ಪಡಿಸಲಾಗಿದ್ದ ವಿಚಾರ ಸಂಕಿರಣದಲ್ಲಿ ವಿಶ್ರಾಂತ ಉಪ ಕುಲಪತಿ ಡಾ.ಕೆ.ನಾರಾಯಣಗೌಡ ಹಾಗು ಕೃಷಿ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ವಿಜಯೇಂದ್ರ ವಿಷಯ ಮಂಡಿಸಿದರು.
ಕೃಷಿಯಲ್ಲಿ ಕೆರೆಗಳ ಪಾತ್ರ ಕುರಿತಂತೆ ಡಾ.ಎಂ.ಎನ್.ರಘು, ಸಮಗ್ರ ಸುಸ್ಥಿರ ಸಾವಯವ ಕೃಷಿ ಪದ್ದತಿಯ ಬಗ್ಗೆ ಡಾ.ಕೆ.ಆರ್.ಹುಲ್ಲುನಾಚೇಗೌಡ ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಶೇ .೧೦೦ ರಷ್ಟು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಸಾಪ ಗೌರವ ಕಾರ್ಯದರ್ಶಿಗಳಾದ ಡಾ.ರಾಜಶೇಖರಹತಗುಂದಿ, ವ.ಚ.ಚನ್ನೇಗೌಡ, ಪಿ.ಮಲ್ಲಿಕಾರ್ಜುನಪ್ಪ, ಆರ್.ಶ್ರೀಧರ್, ರೈತ ಸಂಘದ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ತಾದೂರು ಮಂಜುನಾಥ್, ಎಸ್.ಎಂ.ರವಿಪ್ರಕಾಶ್, ಎಸ್.ಎಂ.ನಾರಾಯಣಸ್ವಾಮಿ, ಹಿತ್ತಲಹಳ್ಳಿ ಗೋಪಾಲಗೌಡ, ಬಿಜೆಪಿ ಮುಖಂಡರಾದ ಡಿ.ಆರ್.ಶಿವಕುಮಾರಗೌಡ, ಸುಂದರಾಚಾರಿ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಿ.ಸಿ.ನಂದೀಶ್, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಮಂಜುನಾಥ್ ಹಾಜರಿದ್ದರು.
ಗಣ್ಯರ ಗೈರು ಹಾಜರಿ: ಕೃಷಿ ಮತ್ತು ಸಹಕಾರ ಸಾಹಿತ್ಯ ಸಮಾವೇಶದ ಉದ್ಘಾಟನೆಯನ್ನು ನೆರವೇರಿಸಬೇಕಿದ್ದ ಕಸಾಪ ರಾಜ್ಯಾಧ್ಯಕ್ಷ ಡಾ.ಮನುಬಳಿಗಾರ್ ಸೇರಿದಂತೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಮಾಜಿ ಶಾಸಕ ವಿ.ಮುನಿಯಪ್ಪ, ರಾಜ್ಯ ಸಹಕಾರ ಮಹಾಮಂಡಲದ ಉಪಾಧ್ಯಕ್ಷ ಎಚ್.ವಿ.ನಾಗರಾಜ್, ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ, ತಹಸೀಲ್ದಾರ್ ಎಸ್.ಅಜಿತ್ಕುಮಾರ್ ರೈ, ಶಾಶ್ವತ ನೀರಾವರಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಆಂಜನೇಯರೆಡ್ಡಿ, ಸಮಾಜ ಸೇವಕ ಬಿ.ಎನ್.ರವಿಕುಮಾರ್, ಆಂಜಿನಪ್ಪ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ನಗರಸಭೆ ಅಧ್ಯಕ್ಷ ಅಫ್ಸರ್ಪಾಷ, ಗೈರು ಹಾಜರಾಗಿದ್ದರು.
- Advertisement -
- Advertisement -
- Advertisement -