ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಕಚೊಕ್ಕಂಡಹಳ್ಳಿ-ಅಂಕತಟ್ಟಿ,ಭಕ್ತರಹಳ್ಳಿ-ಮಳಮಾಚನಹಳ್ಳಿ ರಸ್ತೆ ಅಭಿವೃಧ್ಧಿ ಕಾಮಗಾರಿಗೆ ಶಾಸಕ ವಿ.ಮುನಿಯಪ್ಪ ಬುಧವಾರ ಚಾಲನೆ ನೀಡಿದರು.
ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ೬.೫ ಕೋಟಿ ರೂಗಳ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವಿ.ಮುನಿಯಪ್ಪ ಚಾಲನೆ ನೀಡಿ ಮಾತನಾಡಿ, ಜನ ಮಳೆ ನೀರು ಸಂರಕ್ಷಣೆ ಮಾಡಿಕೊಳ್ಳಲು ಜಾಗೃತಿವಹಿಸದಿದ್ದರೆ ಭವಿಷ್ಯದಲ್ಲಿ ಮತ್ತಷ್ಟು ಕಠಿಣ ದಿನಗಳನ್ನು ನೋಡುವ ಪರಿಸ್ಥಿತಿ ನಿರ್ಮಾಣವಾಗುವುದು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮಳೆ ನೀರು ಸಂರಕ್ಷಣೆ ಮಾಡಲು ವ್ಯಾಪಕವಾಗಿ ಪ್ರಚಾರ ಮಾಡಿ ಅರಿವು ಮೂಡಿಸಬೇಕೆಂದರು.
ಗ್ರಾಮದ ವೆಂಕಟಮೂರ್ತಿ, ನಾರಾಯಣಸ್ವಾಮಿ, ಕೋಚಿಮುಲ್ ನಿರ್ದೇಶಕ ಶ್ರೀನಿವಾಸ್, ಬಿ.ವಿ. ಮುನೇಗೌಡ, ತಾಪಂ ಇಓ ಶಿವಕುಮಾರ್, ರೈತ ಸಂಘದ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ಚಿದಾನಂದಮೂರ್ತಿ, ಬಿಎಂವಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕಾಳಪ್ಪ, ಗುತ್ತಿಗೆದಾರ ಭಾಸ್ಕರ್ ನಾಯ್ಡು, ಲೋಕೇಶ್, ಮಂಜುನಾಥ್, ವಿಶ್ವನಾಥ್, ನರಸಿಂಹಮೂರ್ತಿ, ಹಾಜರಿದ್ದರು.
- Advertisement -
- Advertisement -
- Advertisement -