ಅಂಗವಿಕಲರಿಗೆ ಅನುಕಂಪದ ಬದಲಿಗೆ ಅವಕಾಶಗಳನ್ನು ಕಲ್ಪಿಸಿ

- Advertisement -
- Advertisement -

ಅಂಗವಿಕಲರಿಗೆ ಅನುಕಂಪದ ಬದಲಿಗೆ ಅವಕಾಶಗಳನ್ನು ಕಲ್ಪಿಸಿಕೊಟ್ಟಾಗ ಸಮಾಜದಲ್ಲಿ ಉತ್ತಮವಾದ ವ್ಯಕ್ತಿಗಳಾಗಿ ರೂಪುಗೊಳ್ಳುವುದರಲ್ಲಿ ಅನುಮಾನವಿಲ್ಲವೆಂದು ಸಿವಿಲ್ ನ್ಯಾಯಾಧೀಶರಾದ ವಿಜಯದೇವರಾಜ ಅರಸ್ ಹೇಳಿದರು.
ಪಟ್ಟಣದ ಆಶಾಕಿರಣ ಅಂಧ ಮಕ್ಕಳ ಶಾಲೆಯಲ್ಲಿ ಗುರುವಾರ ತಾಲ್ಲೂಕು ಕಾನೂನು ಸೇವಾ ಸಮಿತಿ ಆಯೋಜನೆ ಮಾಡಿದ್ದ ಅಂಗವಿಕಲರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಅಂಗವೈಕಲ್ಯವೆಂಬುದು ಶಾಪವಲ್ಲ, ಜೀವನದಲ್ಲಿ ಆಕಸ್ಮಿಕವಾಗಿ ಸಂಭವಿಸುವಂತಹ ಕೆಲವು ಘಟನೆಗಳಿಂದ ಅಂಗವೈಕಲ್ಯ ಉಂಟಾಗುತ್ತದೆ, ಇದು ಯಾವುದೇ ಶಾಪವಲ್ಲ. ಸಮಾಜದಲ್ಲಿ ಎಲ್ಲರಂತೆ ಬದುಕು ಕಟ್ಟಿಕೊಳ್ಳುವಂತಹ ಸಾಮರ್ಥ್ಯ ಅಂಗವಿಕಲರಲ್ಲಿದೆ. ಕೈಕಾಲುಗಳಿಲ್ಲದಿದ್ದರೂ ಮೀನಿನಂತೆ ಈಜಬಲ್ಲರು, ವಿಮಾನವನ್ನು ಚಾಲನೆ ಮಾಡಬಲ್ಲರು, ಅಂಗವೈಕಲ್ಯದಿಂದ ಕುಗ್ಗಿ ಹೋಗದೆ ಎಲ್ಲರಂತೆ ಪರೀಕ್ಷೆಗಳಲ್ಲಿ ಉತ್ತಮವಾದ ಫಲಿತಾಂಶವನ್ನು ತರಬಲ್ಲರು. ಇಂತಹ ಮಕ್ಕಳಿಗೆ ಉತ್ತಮವಾದ ಅವಕಾಶಗಳನ್ನು ನೀಡಿದಾಗ ಅವರು ಸಮಾಜದಲ್ಲಿ ಅತ್ಯುನ್ನತ ಸ್ಥಾನಗಳನ್ನು ಅಲಂಕರಿಸುತ್ತಾರೆ ಎಂದರು.
ನ್ಯಾಯಾಧೀಶರಾದ ಶ್ರೀಕಂಠ, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಪಾಪಿರೆಡ್ಡಿ, ಸರ್ಕಾರಿ ವಕೀಲ ಈ.ಡಿ.ಶ್ರೀನಿವಾಸ್ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!