21.5 C
Sidlaghatta
Wednesday, July 30, 2025

ಅಂಧಮಕ್ಕಳ ಶಾಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬ ಆಚರಣೆ

- Advertisement -
- Advertisement -

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಲೋಕೋಪಯೋಗಿ ಸಚಿವ ರೇವಣ್ಣ ಅವರ ಹುಟ್ಟುಹಬ್ಬವನ್ನು ಜೆಡಿಎಸ್ ಕಾರ್ಯಕರ್ತರು ನಗರದ ಆಶಾಕಿರಣ ಅಂಧಮಕ್ಕಳ ಶಾಲೆಯಲ್ಲಿ ಮಕ್ಕಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಆಚರಣೆ ಮಾಡಿ ಜೆಡಿಎಸ್ ಮುಖಂಡ ಬಿ.ಎನ್.ರವಿಕುಮಾರ್ ಮಾತನಾಡಿದರು.
ರೈತ ಸಾಮಾನ್ಯರೇ ಶ್ರೀಸಾಮಾನ್ಯರು ಎಂದು ತಿಳಿದವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ. ರೈತರ ಸಾಲ ಮನ್ನಾ ಮಾಡುವ ಮೂಲಕ ನೇಗಿಲ ಯೋಗಿಯ ಕಷ್ಟಕ್ಕೆ ನೆರವಾಗಿದ್ದಾರೆ ಎಂದು ಅವರು ತಿಳಿಸಿದರು.
ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಗಳಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಜೆವಿಎಸ್ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಹಂತಹಂತವಾಗಿ ಈಡೇರಿಸಲು ಕಂಕಣಬದ್ಧವಾಗಿದ್ದಾರೆ. ಪ್ರತಿಯೊಬ್ಬ ರೈತರು, ಬಡವರು, ಮಹಿಳೆಯರು, ಹಿಂದುಳಿದವರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಕೃಷಿಕರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಈ ರಾಜ್ಯದಲ್ಲಿ ೪೫ ಲಕ್ಷ ರೈತರಿಗೆ ೪೬ ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಮೊದಲ ಹಂತವಾಗಿ ಈಗಾಗಲೇ ಹತ್ತೂವರೆ ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಕನ್ನಡಮಾಡಿನಲ್ಲಿ ಮುಂದೆ ಪ್ರಧಾನಿಯಾಗುವ ಅರ್ಹತೆ ಹೊಂದಿರುವ ಏಕೈಕ ವ್ಯಕ್ತಿ ಕುಮಾರಸ್ವಾಮಿಯವರು. ಜನಸೇವೆ ಮಾಡುವ ಮನಸ್ಸಿರುವ ಅವರಿಗೆ ತಾಯಿ ಚಾಮುಂಡೇಶ್ವರಿ ಶಕ್ತಿ ನೀಡಲಿ. ದೇಶದಲ್ಲಿಯೇ ಮಾದರಿ ರಾಜ್ಯವನ್ನಾಗಿ ಕರ್ನಾಟಕವನ್ನು ಅವರು ಮಾಡಲಿದ್ದಾರೆ ಎಂದು ಹೇಳಿದರು.
ಜೆಡಿಎಸ್ ಕಾರ್ಯಕರ್ತರು ಆಶಾಕಿರಣ ಅಂಧಮಕ್ಕಳ ಶಾಲೆಯಲ್ಲಿ ಮಕ್ಕಳೊಂದಿಗೆ ಕೇಕ್ ಕತ್ತರಿಸುವುದು ಹಾಗೂ ಊಟದ ವ್ಯವಸ್ಥೆಯನ್ನು ಆಯೋಜಿಸಿದ್ದರು. ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣು, ಬ್ರೆಡ್ ಮತ್ತು ಹಾಲನ್ನು ರೋಗಿಗಳಿಗೆ ವಿತರಿಸಲಾಯಿತು.
ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಸ್ವಾಮಿ, ಸದಸ್ಯರಾದ ಲಕ್ಷ್ಮೀನಾರಾಯಣರೆಡ್ಡಿ, ರಾಜಶೇಖರ್, ನರಸಿಂಹಯ್ಯ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಪಿ.ವಿ.ನಾಗರಾಜ್, ಹುಜಗೂರು ರಾಮಣ್ಣ, ಶ್ರೀರಾಮರೆಡ್ಡಿ, ವೆಂಕಟಸ್ವಾಮಿ, ರಮೇಶ್, ಲಕ್ಷ್ಮಣ, ಲಕ್ಷ್ಮೀನಾರಾಯಣ, ಯೂಸುಫ್, ಆದಿಲ್, ಗೋಪಾಲ್, ತಾದೂರು ರಘು, ಸಚಿನ್, ದೊಣ್ಣಹಳ್ಳಿ ರಾಮಣ್ಣ, ಷಫಿ, ವೆಂಕಟಸ್ವಾಮಿ, ಜಗದೀಶ್, ಭಕ್ತರಹಳ್ಳಿ ಗೋಪಾಲಗೌಡ, ಧರ್ಮೇಂದ್ರ, ಆರ್.ಎ.ಉಮೇಶ್, ಬೈರೇಗೌಡ, ಕನ್ನಮಂಗಲ ಚಿಕ್ಕಾಂಜಿನಪ್ಪ, ಶ್ರೀನಿವಾಸಗೌಡ, ಆಂಜಿನಪ್ಪ, ತ್ಯಾಗರಾಜ್, ಮುನಿರಾಜು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!