Home News ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಆಚರಣೆ

ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಆಚರಣೆ

0

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ನವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶಿರಸ್ತೆದಾರ್ ಮಂಜುನಾಥ್ ಮಾತನಾಡಿದರು.
ಮೂಢನಂಬಿಕೆ, ಜಾತಿ ಪದ್ದತಿಯನ್ನು ನಿರ್ಮೊಲನೆ ಮಾಡಲು ಹೋರಾಟ ಮಾಡಿದವರಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಸಹ ಒಬ್ಬರು ಎಂದು ಅವರು ತಿಳಿಸಿದರು.
ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದ ಮಹಾನ್ ಶರಣರು. ಅವರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಪಾಲಿಸಿದಾಗ ಒಳ್ಳೆಯ ಸುಸಂಸ್ಕೃತ ಸಮಾಜ ನಿರ್ಮಣ ಸಾಧ್ಯ ಎಂದರು.
ಅಕ್ಷರ ಪದವಿ ಪೊರ್ವ ಕಾಲೇಜು ಉಪನ್ಯಾಸಕ ಬಿ.ವಿ.ಪ್ರಕಾಶ್ ಮುಖ್ಯ ಭಾಷಣಕಾರರಾಗಿ ಆಗಮಿಸಿ, ಅಂಬಿಗರ ಚೌಡಯ್ಯ ಅವರ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಬೆಸ್ತರ ಸಂಘದ ಶಿವಣ್ಣ, ಸಂಜೀವಪ್ಪ ಕಾರ್ಯಕ್ರಮದಲ್ಲಿ ಹಾಜರಿದ್ದರು.

error: Content is protected !!