ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಸಿದ್ದಾಂತಗಳನ್ನು ಯುವಪೀಳಿಗೆ ಮೈಗೂಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಸಮಾನತೆ ಕಾಪಾಡಲು ಸಾದ್ಯವಾಗುತ್ತದೆ ಎಂದು ಮೇಲೂರು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಜಮುನಾ ಧರ್ಮೇಂದ್ರ ತಿಳಿಸಿದರು.
ತಾಲ್ಲೂಕಿನ ಮೇಲೂರು ಗ್ರಾಮದ ಚೆಂಗಲರಾಯರೆಡ್ಡಿ ವೃತ್ತದಲ್ಲಿ ಗುರುವಾರ ದಲಿತ ಸಂಘಟನೆಗಳಿಂದ ಆಯೋಜನೆ ಮಾಡಲಾಗಿದ್ದ ಅಂಬೇಡ್ಕರ್ ಅವರ ೧೨೫ ನೇ ವರ್ಷದ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಸಮಾಜದಲ್ಲಿನ ಕಟ್ಟಕಡೆಯ ವ್ಯಕ್ತಿಗೂ ಸಮಾನತೆ, ಶಿಕ್ಷಣ ಸಿಗಬೇಕೆಂಬ ಕಲ್ಪನೆಯನ್ನು ಹೊಂದಿದ್ದ ಅಂಬೇಡ್ಕರ್ ಅವರು, ತಮ್ಮ ಜೀವಿತವನ್ನು ಸಮಾಜದಲ್ಲಿ ತುಡಿತಕ್ಕೆ ಒಳಗಾಗಿರುವವರಿಗಾಗಿ ಸಮರ್ಪಣೆ ಮಾಡಿದ್ದರು, ಸಮಾಜದಲ್ಲಿ ಬದಲಾವಣೆಗಳನ್ನು ಕಾಣಬೇಕಾದರೆ, ಎಲ್ಲಾ ವರ್ಗದ ಜನತೆಗೆ ಸಮಾನತೆ ದೊರೆಯಬೇಕಾದರೆ, ಶಿಕ್ಷಣ, ಸಂಘಟನೆ, ಹೋರಾಟಗಳ ಮೂಲಕ ಸಜ್ಜಾಗಬೇಕು, ಯುವಜನತೆ ಪುಸ್ತಕಗಳನ್ನು ಓದುವಂತಹ ಅಭ್ಯಾಸಗಳನ್ನು ಹೆಚ್ಚಾಗಿ ರೂಢಿಸಿಕೊಳ್ಳಬೇಕು ಎಂದರು.
ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲೂ ಅಂಬೇಡ್ಕರ್ ಭಾವಚಿತ್ರಕ್ಕ ಪೂಜೆ ಸಲ್ಲಿಸಿ ಸಿಹಿ ಹಂಚಿಕೆ ಮಾಡಲಾಯಿತು.
ಇದೇ ವೇಳೆ ದಲಿತ ಸಂಘಟನೆ ಮುಖಂಡರಾದ ಲಕ್ಷ್ಮೀನಾರಾಯಣ, ಹಾಗೂ ಚಲಪತಿ ತಂಡದಿಂದ ಕ್ರಾಂತಿಗೀತೆಗಳನ್ನು ಪ್ರಸ್ತುತ ಪಡಿಸಲಾಯಿತು.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪಿ.ವಿ.ಸಿದ್ದಣ್ಣ, ಸದಸ್ಯರಾದ ಕೆ.ಮಂಜುನಾಥ್, ಸಂದ್ಯಾ, ಎಚ್.ಎನ್.ರೂಪೇಶ್, ಜಿ.ಸಿ.ಶ್ರೀನಿವಾಸಮೂರ್ತಿ, ವಿಮಲಮ್ಮ, ಕೆ.ಜಯರಾಮರೆಡ್ಡಿ, ಸಿ.ಎಂ.ಶ್ರೀನಿವಾಸ್, ಪಾರ್ವತಮ್ಮ, ಮುನಿಕೃಷ್ಣಪ್ಪ, ಮಯೂರ, ಅಣ್ಣಪ್ಪ, ಸಿಬ್ಬಂದಿ ಜಿ.ಎಂ.ಜನಾರ್ಧನ, ಮುಂತಾದವರು ಹಾಜರಿದ್ದರು.
- Advertisement -
- Advertisement -
- Advertisement -