Home News ಅತಿಥಿ ಉಪನ್ಯಾಸಕರ ಪ್ರತಿಭಟನೆ

ಅತಿಥಿ ಉಪನ್ಯಾಸಕರ ಪ್ರತಿಭಟನೆ

0

ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ವಿಶೇಷ ನಿಯಮಾವಳಿ ರೂಪಿಸಿ ಸೇವೆಯಲ್ಲಿ ವಿಲೀನಗೊಳಿಸಬೇಕೆಂದು ಒತ್ತಾಯಿಸಿ ತಾಲ್ಲೂಕು ಅತಿಥಿ ಉಪನ್ಯಾಸಕರು, ಡಿ.ವೈ.ಎಫ್.ಐ ಹಾಗೂ ಎಸ್.ಎಫ್.ಐ ಸಂಘಟನೆಯ ಸದಸ್ಯರು ಶುಕ್ರವಾರ ತಾಲ್ಲೂಕು ಕಚೇರಿಯಲ್ಲಿ ಮನವಿಯನ್ನು ಸಲ್ಲಿಸಿದರು.
ರಾಜ್ಯಾದ್ಯಂತ ಸುಮಾರು 14,531 ಅತಿಥಿ ಉಪನ್ಯಾಸಕರು ತಮ್ಮನ್ನು ಸೇವೆಯಲ್ಲಿ ವಿಲೀನಗೊಳಿಸುವ ಬಗ್ಗೆ 35 ದಿನಗಳ ಕಾಲ ಧರಣಿ ನಡೆಸಿದ್ದು, ಸರ್ಕಾರವು ಬೇಡಿಕೆಯನ್ನು ಶೀಘ್ರವಾಗಿ ಈಡೇರಿಸುವಂತೆ ಒತ್ತಾಯಿಸಿದರು.
ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆಗಾಗಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಆಗ್ರಹಿಸುತ್ತಿದ್ದೇವೆ. ಸರ್ಕಾರಿ ಶಾಲಾ ಕಾಲೇಜುಗಳನ್ನು ಆಧುನಿಕರಿಸಬೇಕು. ರಾಜ್ಯ ಬಜೆಟ್ನಲ್ಲಿ ಶೇಕಡಾ 30, ಕೇಂದ್ರ ಬಜೆಟ್ನಲ್ಲಿ ಶೇಕಡಾ 10 ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸಲು ಕೇಂದ್ರೀಯ ಶಾಸನ ಜಾರಿಗೆ ತನ್ನಿ. ಎಲ್ಲಾ ಹಾಸ್ಟೆಲ್ಗಳನ್ನು ಆಧುನೀಕರಿಸಿ, ಊಟದ ಭತ್ಯೆ ಹೆಚ್ಚಿಸಿ ಮುಂತಾದ ಬೇಡಿಕೆಗಳನ್ನಿಟ್ಟು ಬಂದ್ ಆಚರಿಸಿರುವುದಾಗಿ ತಾಲ್ಲೂಕು ಅತಿಥಿ ಉಪನ್ಯಾಸಕರು, ಡಿ.ವೈ.ಎಫ್.ಐ ಹಾಗೂ ಎಸ್.ಎಫ್.ಐ ಸಂಘಟನೆಯ ಸದಸ್ಯರು ಹೇಳಿದರು.
ನಗರದ ಸರ್ಕಾರಿ ಕಾಲೇಜುಗಳು ಮತ್ತು ಸರಸ್ವತಿ ವಿದ್ಯಾಸಂಸ್ಥೆಗಳು ಬಂದ್ ಮಾಡುವ ಮೂಲಕ ಅತಿಥಿ ಉಪನ್ಯಾಸಕರಿಗೆ ಬೆಂಬಲ ನೀಡಿದರು.
ಡಿ.ವೈ.ಎಫ್.ಐ ಹಾಗೂ ಎಸ್.ಎಫ್.ಐ ಸಂಘಟನೆಯ ಸದಸ್ಯರು ಶುಕ್ರವಾರ ತಾಲ್ಲೂಕು ಕಚೇರಿಯಲ್ಲಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ ಪತ್ರವನ್ನು ಗ್ರೇಡ್ 2 ತಹಶೀಲ್ದಾರ್ ವಾಸುದೇವಮೂರ್ತಿ ಅವರಿಗೆ ಸಲ್ಲಿಸಿದರು.
ಡಿ.ವೈ.ಎಫ್.ಐ ರಾಜ್ಯ ಸಮಿತಿ ಸದಸ್ಯ ಮುನೀಂದ್ರ, ನರಸಿಂಹಪ್ಪ, ಬಾಬು, ಸುಬ್ರಮಣಿ, ಅತಿಥಿ ಉಪನ್ಯಾಸಕರ ಸಂಘದ ರಾಮಚಂದ್ರಪ್ಪ, ಬಾಬಾಜಾನ್, ಶ್ರೀನಿವಾಸ್, ರವಿ, ಸಾದತ್, ಮಂಜುನಾಥ, ವೆಂಕಟಾಚಾರಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

error: Content is protected !!