ಚುನಾವಣೆ ಹತ್ತಿರವಾಗುತ್ತಿದೆ ಅಬಕಾರಿ ಇಲಾಖೆ ಅಧಿಕಾರಿಗಳು ಹೆಚ್ಚು ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕೆಂದು ಲೋಕಾಯುಕ್ತ ಡಿ.ವೈ.ಎಸ್.ಪಿ ಕೃಷ್ಣಮೂರ್ತಿ ತಿಳಿಸಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಲೋಕಾಯುಕ್ತರಿಂದ ನಡೆದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕರಣಾ ಸಭೆಯಲ್ಲಿ ಅವರು ಮಾತನಾಡಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ಮುಂದಿನ ಸಭೆಗೆ ಬರುವಾಗ ಸಮರ್ಪಕ ಮಾಹಿತಿಯನ್ನು ತರಬೇಕು. ಕೇಂದ್ರ ಮತ್ತು ಸರ್ಕಾರಿ ಯೋಜನೆಗಳು ಸಮರ್ಪಕವಾಗಿ ಅನುಷ್ಟಾನಗೊಳ್ಳುತ್ತಿದೆಯೇ, ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪುತ್ತಿದೆಯೇ ಎಂಬುದನ್ನು ಪರಿಶೀಲನೆ ನಡೆಸುತ್ತೇವೆ. ವಿದ್ಯಾರ್ಥಿಗಳಿಗೆ ತಲುಪಬೇಕಾದ ವಿದ್ಯಾರ್ಥಿವೇತನ, ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿ ಮೂಲಭೂತ ಸೌಕರ್ಯಗಳು, ನರೇಗಾ ಕೆಲಸಗಳು ಎಲ್ಲ ಮಾಹಿತಿಯನ್ನು ಅಧಿಕಾರಿಗಳು ತರಬೇಕು ಎಂದರು.
ತಹಶೀಲ್ದಾರ್ ಅಜಿತ್ ಕುಮಾರ್ ರೈ ಮಾತನಾಡಿ, ಲೋಕಾಯುಕ್ತ ಅಧಿಕಾರಿಗಳು ಬರುವರೆಂದರೆ ಒಒಂದು ರೀತಿಯ ಆತಂಕದ ವಾತಾವರಣವಿರುತ್ತದೆ. ನಾನೂ ಸೇರಿದಂತೆ ಅಧಿಕಾರಿಗಳು ತಮ್ಮ ಕೆಲಸಗಳನ್ನು ಸಮರ್ಪಕವಾಗಿ ಮಾಡಿ ದಾಖಲೆಗಳನ್ನು ಇಟ್ಟುಕೊಂಡಲ್ಲಿ ಯಾರೂ ಪ್ರಶ್ನಿಸುವುದಿಲ್ಲ. ಅವರ ಉದ್ದೇಶ ಸಾರ್ವಜನಿಕರಿಗೆ ಕೆಲಸಗಳನ್ನು ಮುಂದೂಡದೆ ಶೀಘ್ರವಾಗಿ ಅಧಿಕಾರಿಗಳು ಮಾಡಿಕೊಡಬೇಕು. ಸರ್ಕಾರಿ ಕಚೇರಿಗಳು ಜನಸ್ನೇಹಿ ವಾತಾವರಣದಿಂದ ಇರಬೇಕು ಎಂಬುದಾಗಿದೆ ಎಂದು ಹೇಳಿದರು.
ಲೋಕಾಯುಕ್ತ ಅಧಿಕಾರಿಗಳು ಹನುಮಂತಪುರ ಬಳಿಯ ಬಿಸಿಎಂ ಹಾಸ್ಟೆಲ್ ಪರಿಶೀಲನೆ ನಡೆಸಿದರು.
ಲೋಕಾಯುಕ್ತ ಇನ್ಸ್ಪೆಕ್ಟರ್ ಅಜೇರೇಶ್, ಸರ್ಕಲ್ ಇನ್ಸ್ಪೆಕ್ಟರ್ ಸಿದ್ಧರಾಜು, ಪ್ರಭಾರಿ ತಹಶೀಲ್ದಾರ್ ಮಮತಾ ಕುಮಾರಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







