ಎಷ್ಟೇ ವೈರಿಗಳಾದರೂ ಚುನಾವಣೆಯನ್ನು ತಪ್ಪಿಸಬೇಕು ಎಂದು ಅನಿವಾರ್ಯವಾಗಿ ಎರಡೂ ಪಕ್ಷಗಳು ಸಂಧಾನ ಮಾಡಿಕೊಂಡಿದ್ದೇವೆ. ಸಿದ್ದರಾಮಯ್ಯ ಸರ್ಕಾರವಿದ್ದಾಗ ಪ್ರಕಟಿಸಿದ್ದ ಯೋಜನೆಗಳು ಈಗಲೂ ಮುಂದುವರೆದಿವೆ ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.
ತಾಲ್ಲೂಕಿನ ಬೋದಗೂರು ಗ್ರಾಮದಲ್ಲಿ ಪಶುಪಾಲನ ಮತ್ತು ಪಶುವೈದ್ಯ ಸೇವಾ ಇಲಾಖೆ, ಹಾಲು ಒಕ್ಕೂಟ ಶಿಡ್ಲಘಟ್ಟ ಶಿಬಿರ ಮತ್ತು ಬೋದಗೂರು ಹಾಲು ಉತ್ಪಾದಕರ ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ ಸೋಮವಾರ ನಡೆದ ಹದಿನೈದನೇ ಸುತ್ತಿನ ಕಾಲು ಬಾಯಿ ಜ್ವರ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಲಸಿಕೆಯಿಂದ ಮಾತ್ರ ಕಾಲು-ಬಾಯಿ ಜ್ವರ ರೋಗ ನಿಯಂತ್ರಣ ಸಾಧ್ಯ. ಈ ಹಿನ್ನೆಲೆಯಲ್ಲಿ ರೈತರ ಸಹಕಾರ ಅವಶ್ಯ. ಪ್ರತಿಯೊಬ್ಬರೂ ತಪ್ಪದೆ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದರು.
ಪಶುಪಾಲನ ಮತ್ತು ಪಶುವೈದ್ಯ ಸೇವಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಮುನಿನಾರಾಯಣರೆಡ್ಡಿ ಮಾತನಾಡಿ, ಜನವರಿ ೨೮ ರಿಂದ ಫೆಬ್ರುವರಿ ೧೬ ರವರೆಗೂ ತಾಲ್ಲೂಕಿನಲ್ಲಿ ಕಾಲು ಬಾಯಿ ಜ್ವರ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಾಲ್ಕು ತಂಡಗಳನ್ನಾಗಿ ವೈದ್ಯರು ವಿಂಗಡಿಸಿಕೊಂಡು ಎಲ್ಲಾ ಗ್ರಾಮಗಳಲ್ಲಿಯೂ ಹಸುಗಳಿಗೆ ಲಸಿಕೆ ಹಾಕಲಾಗುವುದು. ಕಾಲು ಬಾಯಿ ಜ್ವರ ನಿಯಂತ್ರಣಕ್ಕಾಗಿ ವರ್ಷಕ್ಕೆ ಎರಡು ಬಾರಿ ಲಸಿಕೆ ಹಾಕುತ್ತಿದ್ದು, ಪ್ರತಿಯೊಬ್ಬರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು ಎಂದು ಹೇಳಿದರು.
ಎ.ಪಿ.ಎಂ.ಸಿ ಉಪಾಧ್ಯಕ್ಷ ಬೆಳ್ಳೂಟಿ ವೆಂಕಟೇಶ್, ಕೋಚಿಮುಲ್ ಶಿಬಿರದ ಉಪವ್ಯವಸ್ಥಾಪಕ ಡಾ.ಚಂದ್ರಶೇಖರ್, ವಿಸ್ತರಣಾಧಿಕಾರಿ ಶಂಕರ್, ಡಾ.ಹರೀಶ್, ಡಾ.ಮಧು, ಚಂದ್ರೇಗೌಡ, ಆನೂರು ಸುರೇಶ್, ಮುನಿರಾಜು, ಬೋದಗೂರು ವೆಂಕಟಸ್ವಾಮಿರೆಡ್ಡಿ, ಆಂಜಿನಪ್ಪ, ನಾರಾಯಣಸ್ವಾಮಿ, ಕೆಂಪಣ್ಣ, ಕೃಷ್ಣಪ್ಪ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







