ನಗರದ ಬಸ್ ನಿಲ್ದಾಣ ಸೇರಿದಂತೆ ಮಯೂರವೃತ್ತ, ಕೋಟೆ ವೃತ್ತದ ಆಟೋ ನಿಲ್ದಾಣಗಳಲ್ಲಿ ನಗರ ಠಾಣೆ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಅಪರಾಧತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ನಗರ ಠಾಣೆಯ ಎಎಸ್ಸೈ ನಾರಾಯಣಸ್ವಾಮಿ ಮಾತನಾಡಿದರು.
ಕಾನೂನನ್ನು ಯಾರು ಗೌರವಿಸಿ, ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸುತ್ತಾರೋ ಅವರು ನೆಮ್ಮದಿಯ ಜೀವನವನ್ನು ನಡೆಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಕಾನೂನುಗಳನ್ನು ಇನ್ನೊಬ್ಬರ ಒತ್ತಾಯಕ್ಕಾಗಿ ಆಗಲಿ, ಪೊಲೀಸರಿಗೆ ಭಯ ಪಟ್ಟು ಆಗಲಿ ಪಾಲಿಸುವುದಲ್ಲ. ಅದು ನಿಮ್ಮ ನಮ್ಮ ಒಳ್ಳೆಯದಕ್ಕಾಗಿಯೆ ಕಾನೂನುಗಳಿದ್ದು, ಎಲ್ಲರ ಸುರಕ್ಷತೆಗಾಗಿ ಕಾನೂನನ್ನು ಪಾಲಿಸುವುದು ಸೂಕ್ತ ಎಂದರು.
ತಂತ್ರಜ್ಞಾನ ಬೆಳೆದಿದ್ದು ಶಾಲಾ ಕಾಲೇಜು ಹಂತದ ಮಕ್ಕಳ ಬೆರಳ ತುದಿಯಲ್ಲೇ ಎಲ್ಲ ಮಾಹಿತಿಗಳೂ ಸಿಗುತ್ತಿದ್ದು, ಇದು ತಮ್ಮ ಜ್ಞಾನದ ಬೆಳವಣಿಗೆಗೆಎಷ್ಟು ಸಹಕಾರಿಯೋ ಹಾದಿ ತಪ್ಪಲು ಕೂಡ ಅಷ್ಟೇ ಕಾರಣವಾಗುತ್ತಿದೆ. ವಿಜ್ಞಾನ ತಂತ್ರಜ್ಞಾನವನ್ನು ವಿದ್ಯಾರ್ಜನೆಗೆ ಬಳಸಿಕೊಂಡವರು ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಏರಿದ್ದರೆ, ಅದನ್ನು ದುರ್ಬಳಕೆ ಮಾಡಿಕೊಂಡವರು ತಪ್ಪು ಮಾಡಿ ಕಾನೂನಿನ ಕುಣಿಕೆಗೆ ಸಿಲುಕಿ ನಲಗುತ್ತಿದ್ದಾರೆ ಎಂದು ಹೇಳಿದರು.
ಎಲ್ಲಿಯೆ ಆಗಲಿ ಲೈಂಗಿಕ ದೌರ್ಜನ್ಯಗಳು ನಡೆದ ತಕ್ಷಣ ತಮ್ಮ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡುವ ಕೆಲಸ ಮೊದಲು ಮಾಡಿ. ಇದರಿಂದ ಸಂತ್ರಸ್ಥರಿಗೆನ್ಯಾಯ ಸಿಗುವುದರ ಜತೆಗೆ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಎಎಸ್ಸೈ ಕೃಷ್ಣಪ್ಪ ಮಾತನಾಡಿ, ೧೮ ವರ್ಷದೊಳಗಿನ ಯಾರೇ ಆಗಲಿ ಅಂಗಡಿಗಳಲ್ಲಿ ಬೀಡಿ ಸಿಗರೇಟ್ ಗುಟ್ಕಾದಂತ ವಸ್ತುಗಳನ್ನು ಮಾರಾಟ ಮಾಡುವುದಾಗಲಿ, ಖರೀದಿಸುವುದಾಗಲಿ ಕಾನೂನು ಪ್ರಕಾರ ತಪ್ಪು. ಯಾರೇ ಅಪರಿಚಿತರು ಕರೆದಾಗ ಹೋಗುವುದು, ಅವರೊಂದಿಗೆ ವ್ಯವಹರಿಸುವುದು ತಪ್ಪು. ಎಟಿಎಂ ಬಳಕೆಯನ್ನು ತಿಳಿದುಕೊಳ್ಳುವುದು ಅಗತ್ಯ ಎಂದು ತಿಳಿಸಿದರು.
ವ್ಯವಹಾರ ಹಾಗೂ ಗಮನವನ್ನೆ ಬೇರೆಡೆ ಸೆಳೆದು ನಡೆಸುವ ಕಳ್ಳತನದ ಬಗ್ಗೆ ಇಲಾಖೆಯಿಂದ ಪ್ರಾತ್ಯಕ್ಷಿಕೆಗಳನ್ನು ನಡೆಸಿ ನಾಗರಿಕರು ಜಾಗರೂಕರಾಗಿರುವಂತೆ ಜಾಥಾ ನಡೆಸಿದರು.
ಈ ಸಂದರ್ಭದಲ್ಲಿ ನಗರಠಾಣೆಯ ಎಎಸ್ಸೈ ವೆಂಕಟರಾಮ್, ಮುಖ್ಯಪೇದೆ ರೆಡ್ಡಿ, ಪೇದೆಗಳಾದ ಸಂತೋಷ, ಗೋವಿಂದ, ವಸಂತ್ ಹಾಜರಿದ್ದರು.
- Advertisement -
- Advertisement -
- Advertisement -
- Advertisement -