ಮಕ್ಕಳನ್ನು ಅಪೌಷ್ಠಿಕತೆಯಿಂದ ರಕ್ಷಣೆ ಮಾಡಬೇಕಾದರೆ, ತಾಯಂದಿರು ಹೆಚ್ಚಿನ ಜಾಗ್ರತೆಯನ್ನು ವಹಿಸಬೇಕು ಎಂದು ಜಿಲ್ಲಾ ಪಂಚಾಯತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ ಹೇಳಿದರು.
ನಗರದ ಸ್ತ್ರೀ ಶಕ್ತಿಭವನದಲ್ಲಿ ಸೋಮವಾರ ಆಯೋಜನೆ ಮಾಡಲಾಗಿದ್ದ ಅಪೌಷ್ಠಿಕ ಮಕ್ಕಳ ಕಾರ್ಯಾಗಾರ ಹಾಗೂ ಅಪೌಷ್ಠಿಕ ಮಕ್ಕಳ ದತ್ತುಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗರ್ಭಿಣಿಯಾಗಿದ್ದಾಗ ತಾಯಂದಿರು ಪೌಷ್ಠಿಕವಾದ ಆಹಾರವನ್ನು ತೆಗೆದುಕೊಳ್ಳದೆ, ಪ್ರತಿಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳದೆ, ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳುವ ಬದಲಾಗಿ ಅವೈಜ್ಞಾನಿಕವಾಗಿ ಹೆರಿಗೆ ಮಾಡಿಸಿಕೊಳ್ಳುವುದರಿಂದ ಮಕ್ಕಳ ಬೆಳವಣಿಗೆ ಕುಂಠಿತವಾಗಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಬೆಳವಣಿಗೆಗೆ ತೊಡಕಾಗುತ್ತದೆ. ಆದ್ದರಿಂದ ತಾಯಂದಿರು ಸಮೀಪದ ಅಂಗನವಾಡಿ ಕಾರ್ಯಕರ್ತೆಯರಿಗೆ ತಿಳಿಸಿ ಅವರಿಂದ ಮಾರ್ಗದರ್ಶನ ಪಡೆಯಬೇಕು. ತಂದೆ ತಾಯಿಗಳು ಮಕ್ಕಳ ಎಲ್ಲಾ ರೀತಿಯ ಬೆಳವಣಿಗೆಯ ಬಗ್ಗೆ ಹೆಚ್ಚು ಗಮನಹರಿಸಬೇಕು. ಮಕ್ಕಳಿಗೆ ನೀಡುವಂತಹ ಆಹಾರಗಳು ಸಮರ್ಪಕವಾಗಿ ನೀಡಬೇಕು ಎಂದರು.
ಸಿ.ಡಿ.ಪಿ.ಓ.ಲಕ್ಷ್ಮೀದೇವಮ್ಮ ಮಾತನಾಡಿ, ಅಪೌಷ್ಠಿಕತೆಯನ್ನು ಹೋಗಲಾಡಿಸಿ, ಎಲ್ಲಾ ಮಕ್ಕಳನ್ನು ಆರೋಗ್ಯವಂತರನ್ನಾಗಿ ಮಾಡಲು ಅನೇಕ ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡಿದ್ದು, ಕಳೆದ ೨೦೧೩ ನೇ ಸಾಲಿಗೆ ಹೋಲಿಕೆ ಮಾಡಿದರೆ ಈಗಿರುವ ಅಪೌಷ್ಠಿಕ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಕೇವಲ ೪೯ ಮಕ್ಕಳು ಮಾತ್ರ ಗುರ್ತಿಸಲ್ಪಟ್ಟಿದ್ದಾರೆ. ಮಕ್ಕಳ ಉತ್ತಮವಾದ ಬೆಳವಣಿಗೆಗೆ ಅಗತ್ಯವಾಗಿರುವ ಪೌಷ್ಠಿಕಾಂಶ ಭರಿತವಾದ ಆಹಾರ ಪೂರೈಕೆ, ಹಾಗೂ ಔಷಧಿಗಳ ವಿತರಣೆಯನ್ನು ಮಾಡಲಾಗುತ್ತಿದ್ದು, ಅಂಗನವಾಡಿ ಕಾರ್ಯಕರ್ತೆಯರು ಈ ಎಲ್ಲಾ ಸೌಲಭ್ಯಗಳನ್ನು ಮಕ್ಕಳಿಗೆ ತಲುಪಿಸಬೇಕು. ವಾರಕ್ಕೊಮ್ಮೆ ತೂಕ ಮಾಡಬೇಕು, ಮಗುವಿನ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು. ಮಗುವಿನ ಬೆಳವಣಿಗೆಗೆ ಅಗತ್ಯವಾಗಿರುವ ಎಲ್ಲಾ ಸಲಹೆಗಳನ್ನು ಪೋಷಕರಿಗೆ ನೀಡಬೇಕು. ಸಮೀಕ್ಷೆ ಮಾಡುವಾಗ ಪ್ರಮಾಣಿಕವಾದ ವರದಿಗಳನ್ನು ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಮಕ್ಕಳಿಗೆ ಔಷಧಿಗಳನ್ನು ವಿತರಣೆ ಮಾಡಲಾಯಿತು.
ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಆಂಜಿನಮ್ಮ, ಮಕ್ಕಳ ತಜ್ಞ ಡಾ.ಗಿರೀಶ್, ಬೈರಾರೆಡ್ಡಿ, ಆರೋಗ್ಯ ನಿರೀಕ್ಷಕಿ ವಿಂದ್ಯಾ, ಮೇಲ್ವಿಚಾರಕಿಯರಾದ ಗಿರಿಜಾಂಬಿಕೆ, ಶಾಂತಾ, ಸಿಬ್ಬಂದಿ ಸಂದೀಪ್ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







