19.1 C
Sidlaghatta
Sunday, February 22, 2026

ಅಭಿವೃದ್ಧಿ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶಿಸಿ

- Advertisement -
- Advertisement -

ಅಭಿವೃದ್ಧಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಿದಾಗ ಮಾತ್ರ ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬಹುದು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಪಲಿಚೇರ್ಲು ಗ್ರಾಮ ಪಂಚಾಯತಿ ವ್ಯಾಪ್ತಿಯ ಕನ್ನಪನಹಳ್ಳಿ ಗ್ರಾಮದಲ್ಲಿ ಶುಕ್ರವಾರ ೩೮ ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆ ಡಾಂಬರೀಕರಣ ಕಾಮಗಾರಿ ಹಾಗು ಗ್ರಾಮದ ಎಸ್ಸಿ ಕಾಲೋನಿಯಲ್ಲಿ ೬ ರೂಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕಳೆದ ಮೂರು ವರ್ಷಗಳಿಂದ ತಾಲ್ಲೂಕಿನಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ದಿ ಕಾಮಗಾರಿಗಳನ್ನು ಮಾಡಲಾಗುವುದೆಂದರು.
ಜಿಲ್ಲಾ ಪಂಚಾಯತಿ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಸ್ಥಳೀಯ ಮುಖಂಡರೂ ಸೇರಿದಂತೆ ಗ್ರಾಮಸ್ಥರು ನಿಗಾ ವಹಿಸಬೇಕು. ಕಾಮಗಾರಿಯ ಗುಣಮಟ್ಟದಲ್ಲಿ ರಾಜಿಯಾಗಬಾರದು ಎಂದರು.
ಅಬ್ಲೂಡು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕೆ.ಎಸ್.ಕನಕಪ್ರಸಾದ್, ಪಲಿಚೇರ್ಲು ತಾಲ್ಲೂಕು ಪಂಚಾಯತಿ ಸದಸ್ಯೆ ಮಂಜುಳಮ್ಮ, ಗ್ರಾಮ ಪಂಚಾಯತಿ ಸದಸ್ಯೆ ಅರುಣ, ಮುಖಂಡರಾದ ಮುನಿಯಪ್ಪ, ಗುಮ್ಮರೆಡ್ಡಿ, ಬೈರರೆಡ್ಡಿ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!