ಆಂಜಿನಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

- Advertisement -
- Advertisement -

ಕಾಂಗ್ರೆಸ್‌ ಪಕ್ಷದಿಂದ ಟಿಕೇಟ್‌ಗಾಗಿ ತಮ್ಮ ಉಮ್ಮೇದುವಾರಿಕೆಯ ಅರ್ಜಿಯನ್ನು ಆಂಜಿನಪ್ಪ ಕೆಪಿಸಿಸಿ ವೀಕ್ಷಕರಿಗೆ ಸಲ್ಲಿಸಿದ್ದರು. ಆದರೆ ಕಾಂಗ್ರೆಸ್‌ ಪಕ್ಷದಿಂದ ವಿ.ಮುನಿಯಪ್ಪ ಅವರಿಗೆ ಟಿಕೆಟ್‌ ಘೋಷಣೆಯಾದ್ದರಿಂದ ಬಂಡಾಯವೆದ್ದ ಆಂಜಿನಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ.
ಮೇ ೧೨ ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೊದಲ ದಿನವಾದ ಮಂಗಳವಾರ ಶಿಡ್ಲಘಟ್ಟ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಆಂಜಿನಪ್ಪ (ಪುಟ್ಟು) ನಾಮಪತ್ರ ಸಲ್ಲಿಸಿದ್ದಾರೆ.
ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿಯಿರುವ ಎಸ್.ಎನ್.ಕ್ರಿಯಾ ಟ್ರಸ್ಟ್ ಕಚೇರಿಯಿಂದ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ಆಂಜಿನಪ್ಪ ಚುನಾವಣಾಧಿಕಾರಿ ಮಲ್ಲಿಕಾರ್ಜುನ್‌ರಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರವನ್ನು ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಈಗಾಗಲೇ ಕ್ಷೇತ್ರದಾದ್ಯಂತ ವಿವಿಧ ಸಾಮಾಜಿಕ ಕಾರ್ಯಗಳ ಮೂಲಕ ಜನತೆಯ ಸೇವೆಯನ್ನು ಮಾಡುತ್ತಾ ಬಂದಿದ್ದೇನೆ. ಮುಂದಿನ ದಿನಗಳಲ್ಲಿಯೂ ಕೂಡಾ ಉತ್ತಮಸೇವೆಯನ್ನು ಮಾಡುವುದರ ಜೊತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕಡೆಗೆ ಗಮನವನ್ನು ನೀಡುತ್ತೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡುವಂತಹವರನ್ನು ಈ ಬಾರಿ ಕ್ಷೇತ್ರದ ಜನತೆ ಆಯ್ಕೆ ಮಾಡಲಿದ್ದಾರೆ. ಆ ನಿಟ್ಟಿನಲ್ಲಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದೇನೆ’ ಎಂದರು.
ನಾಮಪತ್ರ ಸಲ್ಲಿಸಿದ ವೇಳೆ ಮುಖಂಡರಾದ ಹಿತ್ತಲಹಳ್ಳಿ ಕೃಷ್ಣಪ್ಪ, ಎಸ್.ವಿ.ಅಯ್ಯರ್, ಅಫ್ಸರ್‌ಪಾಷ, ಎ.ದೇವರಾಜು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!