20.5 C
Sidlaghatta
Monday, July 7, 2025

ಆತ್ಮಹತ್ಯೆ ತನಿಖೆಯನ್ನು ಸಿ.ಬಿ.ಐ ಗೆ ವಹಿಸಲು ಒತ್ತಾಯ

- Advertisement -
- Advertisement -

ಡಿ.ವೈ.ಎಸ್.ಪಿ ಗಣಪತಿ ಆತ್ಮಹತ್ಯೆ ತನಿಖೆಯನ್ನು ಸಿ.ಬಿ.ಐ ಗೆ ವಹಿಸಬೇಕೆಂದು ಮಂಗಳವಾರ ಬಿ.ಜೆ.ಪಿ ತಾಲ್ಲೂಕು ಘಟಕದ ಸದಸ್ಯರು ಒತ್ತಾಯಿಸಿದರು.
ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಬೆಂಗಳೂರು ಅಭಿವೃದ್ಧಿ ಸಚಿವ ಕೆಜೆ ಜಾರ್ಜ್ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ನಗರದ ಬಸ್ನಿಲ್ದಾಣದ ಬಳಿ ಬಿ.ಜೆ.ಪಿ ತಾಲ್ಲೂಕು ಘಟಕದ ಸದಸ್ಯರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ನಂತರ ಮೆರವಣಿಗೆಯಲ್ಲಿ ಸಾಗಿ ಮಾಜಿ ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಹಿರಿಯ ಇನ್ನರು ಐ.ಎ.ಎಸ್ ಅಧಿಕಾರಿಗಳನ್ನು ಸಿ.ಬಿ.ಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.
ಗೃಹಮಂತ್ರಿಯ ವಿಶೇಷ ಅಧಿಕಾರಿ ಕೆಂಪಯ್ಯ ಅವರನ್ನು ಕೂಡ ಈ ಸಂದರ್ಭದಲ್ಲಿ ವಜಾಗೊಳಿಸಬೇಕೆಂದು ಆಗ್ರಹಿಸಿದರು.
ತಾಲ್ಲೂಕು ಕಛೇರಿಯ ಮುಂದೆ ಧರಣಿ ನಡೆಸಿದ ಬಿ.ಜೆ.ಪಿ ಕಾರ್ಯಕರ್ತರು ತಹಶೀಲ್ದಾರ್ ಮನೋರಮಾ ಅವರಿಗೆ ಮನವಿಯನ್ನು ಸಲ್ಲಿಸಿದರು.
ಬಿ.ಜೆ.ಪಿ ತಾಲ್ಲೂಕು ಅಧ್ಯಕ್ಷ ಬಿ.ಸಿ.ನಂದೀಶ್, ಕಾರ್ಯದರ್ಶಿಗಳಾದ ತರಬಳ್ಳಿ ಭಾಸ್ಕರರೆಡ್ಡಿ, ಮುನಿರಾಜು, ಸದಸ್ಯರಾದ ಪುರುಷೋತ್ತಮ್, ಸುರೇಂದ್ರಗೌಡ, ಮಂಜುಳಮ್ಮ, ದೊಣ್ಣಹಳ್ಳಿ ರಾಮಣ್ಣ, ಸುಜಾತಮ್ಮ, ಸಾವಿತ್ರಮ್ಮ, ರವಿಕುಮಾರ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!