Home News ಆಮ್ಆದ್ಮಿ ಪಕ್ಷದ ಕಚೇರಿ ಉದ್ಘಾಟನೆ

ಆಮ್ಆದ್ಮಿ ಪಕ್ಷದ ಕಚೇರಿ ಉದ್ಘಾಟನೆ

0

ದೇಶದ ರಾಜಧಾನಿಯಲ್ಲಿ ಆಡಳಿತ ನಡೆಸಸುತ್ತಿರುವ ಅರವಿಂದ್ ಕ್ರೇಜಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರ ಜನರ ಅಶೋತ್ತರಗಳಿಗೆ ಸ್ವಂದಿಸುತ್ತಿದ್ದು, ನಮ್ಮ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷವನ್ನು ಸಂಘಟಿಸಲು ಶ್ರಮಿಸಲಾಗುವುದು ಎಂದು ಆಮ್ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ತಿಳಿಸಿದರು.
ನಗರದ ಓ.ಟಿ.ವೃತ್ತದಲ್ಲಿ ಭಾನುವಾರ ಸಂಜೆ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಸಾಮಾನ್ಯರಿಗೆ ಭ್ರಷ್ಟಚಾರ ಮುಕ್ತ ಆಡಳಿತ ನೀಡಬೇಕಾದ ಸರ್ಕಾರ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಸಂಸ್ಥೆಯನ್ನು ದುರ್ಬಲಗೊಳಿಸಲು ಹೊರಟಿದೆ. ಸರ್ಕಾರದ ವಿರುದ್ದ ಆಮ್ ಆದ್ಮಿ ಪಾರ್ಟಿಯಿಂದ ರಾಜ್ಯಾದ್ಯಾಂತ ಹೋರಾಟ ನಡೆಸುವುದಾಗಿ ತಿಳಿಸಿದರು.
ಭ್ರಷ್ಟಚಾರದಲ್ಲಿ ತೊಡಗಿರುವ ಕಾಂಗ್ರೆಸ್, ಬಿ.ಜೆ.ಪಿ, ಜೆ.ಡಿ.ಸ್ ಪಕ್ಷಗಳು ನಮಗೆ ಸಮಾನಾಂತರ ಶತ್ರುಗಳಾಗಿವೆ. ಮುಂದಿನ ದಿನಗಳಲ್ಲಿ ಭ್ರಷ್ಟಚಾರ ವಿರೋಧಿ, ಸಾಮಾನ್ಯ ಜನರ ಪಕ್ಷವಾದ ಆಮ್ ಆದ್ಮಿಯನ್ನು ಅಧಿಕಾರಕ್ಕೆ ತರುವದೇ ನಮ್ಮ ಗುರಿಯಾಗಿದೆ. ೨೦೧೮ ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಪ್ರಚಂಡ ಜಯ ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಸಾರಿಗೆ ಬಸ್ ನಿಲ್ದಾಣದಿಂದ ಪ್ರಮುಖ ಬೀದಿಗಳಲ್ಲಿ ಆಮ್ ಆದ್ಮಿ ಪಕ್ಷದ ಕರಪತ್ರಗಳನ್ನು ಹಂಚಿ ಭ್ರಷ್ಟಾಚಾರ ನಿರ್ಮೂಲನೆಗಾಗಿ ಆಮ್ ಆದ್ಮಿ ಪಕ್ಷ ಸೇರಿ ಎಂಬ ಘೋಷಣೆಯೊಂದಿಗೆ ಮೆರವಣಿಗೆ ನಡೆಸಿದರು.
ಸಭೆಯಲ್ಲಿ ಈಧರೆ ಪ್ರಕಾಶ್ ಮತ್ತು ಸಂಗಡಿಗರು ಕ್ರಾಂತಿಕಾರಿ ಗೀತೆಗಳನ್ನು ಹಾಡಿದರು.
ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಸಂಚಾಲಕ ಅಭಿಲಾಷ್, ತಾಲ್ಲೂಕು ಸಂಚಾಲಕ ವಿಸ್ಡಂ ನಾಗರಾಜ್, ಹಸಿರುಸೇನೆ ರೈತ ಸಂಘದ ಜಿಲ್ಲಾಧ್ಯಕ್ಷ ಬೈರೇಗೌಡ, ಹಸಿರುಸೇನೆ ರೈತಸಂಘದ ತಾಲ್ಲೂಕು ಅಧ್ಯಕ್ಷ ರವಿಪ್ರಕಾಶ್ ಮತ್ತು ಆಮ್ ಆದ್ಮಿ ಪಾರ್ಟಿಯ ಕಾರ್ಯಕರ್ತರು ಹಾಜರಿದ್ದರು.

error: Content is protected !!