22.1 C
Sidlaghatta
Monday, October 27, 2025

ಆಸನಗಳ ವ್ಯವಸ್ಥೆಯಿಲ್ಲದೆ ಮಣ್ಣಿನಲ್ಲೆ ಕುಳಿತು ಪರೀಕ್ಷೆ ಬರೆದ ಮಕ್ಕಳು

- Advertisement -
- Advertisement -

ನಗರದ ಸರಸ್ವತಿ ವಿದ್ಯಾಸಂಸ್ಥೆಯ ಆಂಗ್ಲಮಾಧ್ಯಮ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 7 ನೇ ತರಗತಿಯ 43 ಮಂದಿ ವಿದ್ಯಾರ್ಥಿಗಳು ಶುಕ್ರವಾರ ಮಣ್ಣಿನ ನೆಲದಲ್ಲಿ ಕುಳಿತು ಪರೀಕ್ಷೆ ಬರೆದರು.
ನಗರದ ದಿಬ್ಬೂರಹಳ್ಳಿ ರಸ್ತೆಯಲ್ಲಿರುವ ಸರಸ್ವತಿ ಕಾನ್ವೆಂಟ್ ಶಾಲೆಯಲ್ಲಿ ಮಕ್ಕಳಿಗೆ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಅವರಿಗೆ ಸೂಕ್ತವಾದ ಆಸನಗಳ ವ್ಯವಸ್ಥೆಯಿಲ್ಲದಂತಾಗಿದ್ದು, 43 ಮಂದಿ ಮಕ್ಕಳು ಶಾಲೆಯ ಸರ್ಜಾದ ನೆರಳಿನಲ್ಲಿ ಮಣ್ಣಿನಲ್ಲೆ ಕುಳಿತು ಪರೀಕ್ಷೆ ಬರೆದರು.
ವಿಪರ್ಯಾಸವೆಂದರೆ ಈ ಶಾಲೆಯ ಮುಂಭಾಗದಲ್ಲೆ ತಾಲ್ಲೂಕು ಕಚೇರಿ ಸೇರಿದಂತೆ ಅನೇಕ ಇಲಾಖೆಗಳು ಕಾರ್ಯನಿರ್ವಹಿಸುತ್ತಿದ್ದರೂ ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಯಾರೂ ಪ್ರಶ್ನಿಸುತ್ತಿಲ್ಲ. ಪ್ರತಿವರ್ಷ ಸಾವಿರಾರು ರೂಪಾಯಿಗಳ ಹಣವನ್ನು ಕಟ್ಟಿಸಿಕೊಳ್ಳುವ ಶಾಲಾಡಳಿತ ಮಂಡಳಿಯವರು ಮಕ್ಕಳಿಗೆ ಸೂಕ್ತವಾದ ವ್ಯವಸ್ಥೆಯನ್ನು ಮಾಡಿಕೊಟ್ಟಿಲ್ಲ. ಪ್ರತಿಯೊಂದು ಕೊಠಡಿಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಮಕ್ಕಳನ್ನು ಕೂರಿಸಲಾಗುತ್ತಿದ್ದು, ಮಕ್ಕಳು ವ್ಯವಸ್ಥಿತವಾಗಿ ಕಲಿಯುವಂತಹ ವಾತಾವರಣವಿಲ್ಲದಂತಾಗಿದೆ ಎಂದು ಕೆಲ ಪೋಷಕರು ಆರೋಪಿಸಿದ್ದಾರೆ.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!