31.1 C
Sidlaghatta
Saturday, April 20, 2024

ಇಂಗ್ಲೀಷ್ ವ್ಯಾಮೋಹ ಬಿಡಿ ಮಾತೃಭಾಷೆ ಕಲಿ

- Advertisement -
- Advertisement -

ಸುಮಾರು 2500 ವರ್ಷಗಳ ಇತಿಹಾಸ ಸೇರಿದಂತೆ ಒಂಭತ್ತು ಮಂದಿ ಜ್ಞಾನಪೀಠ ಪ್ರಶಸ್ತಿ ಪುರಸ್ಕøತರೂ, ಶಾಸ್ತ್ರೀಯ ಸ್ಥಾನಮಾನ ಪಡೆದಂತಹ ಕನ್ನಡ ಭಾಷೆಯ ಉಳಿವಿಗಾಗಿ ಇಂದಿಗೂ ಹೋರಾಟ ಮಾಡುವ ಸನ್ನಿವೇಶ ಬಂದಿರುವುದು ನಿಜಕ್ಕೂ ಶೋಚನೀಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಹೆಚ್.ಶಿವರಾಮೇಗೌಡ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಘಟಕದಿಂದ ಗ್ರಾಮದ ಮುಖಂಡ ಶೇಖರಣ್ಣ ಅವರ ನೆನಪಿನಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸುಮಾರು 400 ವರ್ಷಗಳ ಕಾಲ ದೇಶವನ್ನಾಳಿದ ಬ್ರಿಟೀಷರನ್ನು ಇಲ್ಲಿಂದ ಓಡಿಸಲು ಅನೇಕರು ಪ್ರಾಣ ತ್ಯಾಗ ಮಾಡುವುದರೊಂದಿಗೆ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರಾದರೂ ನಮ್ಮವರ ಇಂಗ್ಲೀಷ್ ವ್ಯಾಮೋಹವನ್ನು ಹೋಗಲಾಡಿಸಲಾಗಲಿಲ್ಲ ಎಂದರು.
ನಮಗಿರುವ ಅನ್ಯ ಭಾಷೆಗಳ ಮೋಹದಿಂದಾಗಿ ನಮ್ಮ ಮಾತೃ ಭಾಷೆಯಾದ ಕನ್ನಡ ತೆರೆ ಮೆರಗೆ ಸರಿಯುತ್ತಿದ್ದು ನಮ್ಮ ಕಲೆ, ಸಂಸ್ಕøತಿಯನ್ನು ನಾವೇ ನಶಿಸುವಂತೆ ಮಾಡುತ್ತಿದ್ದೇವೆ ಎಂದರು.
ಇಂದಿನ ಮಕ್ಕಳಿಗೆ ನಮ್ಮ ದೇಶೀಯ ಕ್ರೀಡೆ ಸೇರಿದಂತೆ ಜಾನಪದ ಕಲೆ, ಸಾಹಿತ್ಯ ಸಂಸ್ಕøತಿಯನ್ನು ಕಲಿಸುವುದನ್ನು ಬಿಟ್ಟು ಕಂಪ್ಯೂಟರ್‍ಗಳ ಮೂಲಕ ಅವರನ್ನು ಬಂಧಿಸಿ ಅವರನ್ನು ಕೇವಲ ಒಂದು ಯಂತ್ರದಂತೆ ತಯಾರಿಸುತ್ತಿದ್ದೇವೆ ಎಂದರು.
ನಮ್ಮ ಮಕ್ಕಳು ಆಂಗ್ಲಮಾಧ್ಯಮ ಶಾಲೆಗಳಲ್ಲಿ ಓದಿದರೆ ನಮಗೆ ಗೌರವವೆಂಬಂತೆ ಭಾವಿಸಿ ಮಕ್ಕಳನ್ನು ಖಾಸಗಿ ಶಾಲೆಗಳಲ್ಲಿನ ಆಂಗ್ಲ ಮಾಧ್ಯಮ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸುವುದರಿಂದ ಇಂದಿನ ಮಕ್ಕಳಲ್ಲಿ ಕನ್ನಡ ಭಾಷೆಯ ಇತಿಹಾಸ ಗೊತ್ತಾಗುತ್ತಿಲ್ಲ ಎಂದರು.
ಹಾಗಾಗಿ ಪ್ರತಿಯೊಬ್ಬರೂ ತಮ್ಮ ಮಾತೃಭಾಷೆ ಕನ್ನಡವನ್ನು ಮಕ್ಕಳಿಗೆ ಕಲಿಸಲು ಮುಂದಾಗಬೇಕು ಹಾಗು ನಮ್ಮ ನೆಲ, ಜಲ, ಭಾಷೆಗೆ ಕುತ್ತು ಬಾರದಂತೆ ಅದನ್ನು ಉಳಿಸಿ ಬೆಳಸಲು ಕಂಕಣ ಬದ್ಧರಾಗಬೇಕು ಎಂದರು.
ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಜಿಲ್ಲಾಧ್ಯಕ್ಷ ಅಗಲಗುರ್ಕಿ ಚಲಪತಿ ಮಾತನಾಡಿ, ರಾಜ್ಯದ ಗಡಿಭಾಗಗಳಷ್ಟೆ ಅಲ್ಲದೆ ರಾಜ್ಯದೊಳಗೆ ಕನ್ನಡ ಭಾಷೆಯನ್ನು ರಕ್ಷಣೆ ಮಾಡುವುದರ ಜೊತೆಗೆ ಈ ಭಾಗದ ರೈತರ ಸಮಸ್ಯೆಗೆ ಸ್ಪಂದಿಸುವ ಕೆಲಸವನ್ನು ಸಂಘಟನೆಗಳು ಮಾಡಬೇಕು ಎಂದರು.
ರೈತ ಉಳಿದರೆ ಮಾತ್ರ ದೇಶಕ್ಕೆ ಉಳಿಗಾಲವಿರುತ್ತದೆ ಹಾಗಾಗಿ ಈ ಭಾಗದ ರೈತರು ಶಾಶ್ವತ ನೀರಾವರಿಗಾಗಿ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ಎಚ್ಚೆತ್ತುಕೊಳ್ಳದ ಸರಕಾರವನ್ನು ಹೋರಾಟಗಳ ಮೂಲಕ ಎಚ್ಚರಿಸುವ ಕೆಲಸವನ್ನು ಸಂಘಟನೆ ಮಾಡಬೇಕು ಎಂದ ಅವರು ಸರ್ಕಾರ ಹೋರಾಟಗಾರರ ವಿನಾಕಾರಣ ಕೇಸು ದಾಖಲಿಸುತ್ತಿದ್ದು ಸರಕಾರದ ಯಾವುದೇ ಬೆದರಿಕೆಗಳಿಗೆ ಅಂಜದೇ ರೈತರ ಹೋರಾಟಕ್ಕೆ ಎಲ್ಲಾ ಸಂಘಟನೆಗಳು ಬೆಂಬಲಿಸುವುದರೊಂದಿಗೆ ಈ ಭಾಗದ ಜನರಿಗೆ ಕುಡಿಯುವ ನೀರು ಸೇರಿದಂತೆ ಕೃಷಿಗೆ ನೀರು ತರುವ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನವಾಗುವವರೆಗೂ ಹೋರಾಟಗಳಲ್ಲಿ ಮನೆಗೊಬ್ಬರಂತೆ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಗ್ರಾಮದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಸೇರಿದಂತೆ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.
ಶಾಶ್ವತ ನೀರಾವರಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಆಂಜನೇಯರೆಡ್ಡಿ, ಡಾ.ಡಿ.ಕೆ.ರಮೇಶ್, ಗ್ರಾಮದ ಹಿರಿಯ ಮುಖಂಡ ಬೈರೇಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಾಮಾಂಜಿನಪ್ಪ, ಗ್ರಾ.ಪಂ ಕಾರ್ಯದರ್ಶಿ ಸಿ.ರಾಜಣ್ಣ, ಕರವೇ ತಾಲ್ಲೂಕು ಅಧ್ಯಕ್ಷ ಮೇಲೂರು ಶ್ರೀಧರ್, ಚೌಡಸಂದ್ರ ಶ್ರೀನಿವಾಸ್, ಮತ್ತಿತರರು ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!