ಇಂದ್ರಧನುಷ್ ಲಸಿಕೆ ಕಾರ್ಯಕ್ರಮ

- Advertisement -
- Advertisement -

ಇಂದ್ರಧನುಷ್ ಲಸಿಕೆಯನ್ನು ಹಾಕಿಸುವುದರಿಂದ ಮಕ್ಕಳಿಗೆ ಬರುವಂತಹ ಏಳು ಬಗೆಯ ಖಾಯಿಲೆಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಆಯೋಜನೆ ಮಾಡಲಾಗಿದ್ದ ಇಂದ್ರಧನುಷ್, ಲಸಿಕಾ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಪ್ರತಿಯೊಬ್ಬ ತಾಯಂದಿರು ತಮ್ಮ ಮಕ್ಕಳಿಗೆ ಲಸಿಕೆಗಳನ್ನು ಹಾಕಿಸುವ ಮೂಲಕ ಮಕ್ಕಳಿಗೆ ಹರಡಬಹುದಾದಂತಹ ಏಳು ಬಗೆಯ ಖಾಯಿಲೆಗಳನ್ನು ತಡೆಗಟ್ಟಲು ಸಹಕಾರಿಯಾಗುತ್ತದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು, ಹಾಗೂ ಸಿಬ್ಬಂದಿ ಬದ್ಧತೆಯಿಂದ ಕೆಲಸ ಮಾಡಿದಾಗ ಮಾತ್ರ ಸರ್ಕಾರ ಆಯೋಜನೆ ಮಾಡುವಂತಹ ಇಂತಹ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ. ೯೧ ಕೇಂದ್ರಗಳನ್ನು ಮಾಡಿ, ೧೪೮ ತಂಡಗಳನ್ನು ರಚನೆ ಮಾಡಿ, ತಾಲ್ಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿನ ಮಕ್ಕಳಿಗೆ ಲಸಿಕೆ ಹಾಕಿಸಬೇಕು. ಮಕ್ಕಳು ಲಸಿಕೆಯಿಂದ ವಂಚಿತರಾಗದಂತೆ ಜಾಗ್ರತೆ ವಹಿಸಬೇಕು. ಅಂಗನವಾಡಿ ನೌಕರರು ಹಾಗೂ ಆಶಾ ಕಾರ್ಯಕರ್ತೆಯರೂ ಕೂಡಾ ಇಂತಹ ಉತ್ತಮವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಯಾಗಿ ಮಾಡಬೇಕು ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅನಿಲ್ಕುಮಾರ್, ಅಕ್ಕಲರೆಡ್ಡಿ, ಡಾ.ತಿಮ್ಮೇಗೌಡ, ತುಮ್ಮನಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸುರೇಂದ್ರ, ಎನ್.ಕೆ.ಗುರುರಾಜ್ ರಾವ್, ಸುಭ್ರಮಣಿ ಮತ್ತಿತರರು ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!