ನಗರದ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ನಿಂತು ಹೋಗಿದ್ದ ಇ–ಹರಾಜು ಮೇ 9 ರಿಂದ ಪುನರಾರಂಭಿಸಲಾಗುವುದು ಎಂದು ರೇಷ್ಮೆ ಇಲಾಖೆಯ ಬೆಂಗಳೂರು ವಿಭಾಗದ ಜಂಟಿ ನಿರ್ದೇಶಕ ಎಸ್.ಆರ್.ಪ್ರಭಾಕರ್ ತಿಳಿಸಿದರು.
ನಗರದ ರೇಷ್ಮೆ ಗೂಡಿನ ಮಾರುಕಟ್ಟೆಗೆ ಬುಧವಾರ ಭೇಟಿ ನೀಡಿದ ಅವರು ಪುನರ್ ಪ್ರಾರಂಭಿಸಲಾಗುತ್ತಿರುವ ಇ–ಹರಾಜಿನ ಸಿದ್ಧತೆಗಳ ಬಗ್ಗೆ ಪರಿವೀಕ್ಷಣೆ ನಡೆಸಿ ಅವರು ಮಾತನಾಡಿದರು.
ಕೆಲವಾರು ತಾಂತ್ರಿಕ ದೋಷಗಳಿಂದ ಈ ಮೊದಲು ಪ್ರಾರಂಭಿಸಿದ್ದ ಇ–ಹರಾಜು ನಿಲ್ಲಿಸಬೇಕಾಗಿ ಬಂದಿತ್ತು. ಆದರೆ ಈಗ ತಾಂತ್ರಿಕತೆಯನ್ನು ಉನ್ನತೀಕರಿಸಲಾಗಿದೆ. ಮೇ 9 ರಿಂದ ಮರು ಚಾಲನೆ ನೀಡಲಾಗುತ್ತಿದೆ. ಈಗಾಗಲೇ ಹರಾಜು ನಡೆಸಲು ತಮ್ಮ ಮೊಬೈಲ್ಗಳಲ್ಲಿ ಅಪ್ಲಿಕೇಷನ್ ಹಾಕಿಕೊಂಡಿರುವ ರೀಲರುಗಳು ಅಪ್ಡೇಟ್ ಮಾಡಿಕೊಳ್ಳಬೇಕು. ಹೊಸದಾಗಿ ಹಾಕಿಸಿಕೊಳ್ಳುವವರಿಗೂ ಮೊಬೈಲ್ನಲ್ಲಿ ಅಪ್ಲಿಕೇಷನ್ ಹಾಕಿಕೊಡಲಾಗುವುದು. ಆದರೆ ಯಾವುದೇ ಕಾರಣಕ್ಕೂ ಇ–ಹರಾಜು ನಿಲ್ಲಿಸುವುದಿಲ್ಲ. ಇದರಿಂದ ಸಾಕಷ್ಟು ಹಣ ದುರುಪಯೋಗ ತಪ್ಪುತ್ತದೆ. ರೈತರು ಮತ್ತು ರೀಲರುಗಳಿಗೂ ಅನುಕೂಲವಾಗುತ್ತದೆ ಎಂದು ಹೇಳಿದರು.
ರೇಷ್ಮೆ ಮಾರುಕಟ್ಟೆ ವಿಭಾಗದ ಕೇಂದ್ರ ಕಚೇರಿಯ ಉಪನಿರ್ದೇಶಕ ಮೊಯ್ನುದ್ದೀನ್, ಶಿಡ್ಲಘಟ್ಟ ರೇಷ್ಮೆ ಗೂಡಿನ ಮಾರುಕಟ್ಟೆಯ ಉಪನಿರ್ದೇಶಕ ಎಂ.ಎನ್.ರತ್ನಯ್ಯಶೆಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -