ನಗರದ ಬಸ್ ನಿಲ್ದಾಣದ ಎದುರಿನಲ್ಲಿರುವ ವೆಂಕಟೇಶ್ವರ ಕಲ್ಯಾಣಮಂಟಪದಲ್ಲಿ ಎಸ್.ಎನ್.ಕ್ರಿಯಾ ಟ್ರಸ್ಟ್ನ ವತಿಯಿಂದ ಮೇ ೮ ರ ಭಾನುವಾರದಂದು ಬೆಳಿಗ್ಗೆ ೯ ರಿಂದ ಸಂಜೆ ೪ ಗಂಟೆಯವರೆಗೆ ಉಚಿತ ಕಣ್ಣಿನ ತಪಾಸಣೆ ಶಸ್ತ್ರಚಿಕಿತ್ಸೆ ಹಾಗೂ ವಾಕ್ ಮತ್ತು ಶ್ರವಣ (ಕಿವಿ) ತಪಾಸಣೆ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು, ಶಿಬಿರಕ್ಕೆ ಆಗಮಿಸುವವರಿಗೆ ಉಪಹಾರದ ವ್ಯವಸ್ಥೆ ಮಾಡಲಾಗುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ.
- Advertisement -