20.9 C
Sidlaghatta
Saturday, October 11, 2025

ಉಚಿತ ನೇತ್ರ ತಪಾಸಣೆ ಶಿಬಿರ

- Advertisement -
- Advertisement -

ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು ಕೂಡ ನಾಡು ನುಡಿಯನ್ನು ಕಾಪಾಡಿದಷ್ಟೇ ಮುಖ್ಯವಾದದ್ದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಲೋಕೇಶ್ ತಿಳಿಸಿದರು.
ತಾಲ್ಲೂಕಿನ ವೀರಾಪುರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ಮತ್ತು ಎಂ.ಎಸ್.ರಾಮಯ್ಯ ಆಸ್ವತ್ರೆ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಶಿಬಿರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕರವೇ ಸಂಘಟನೆಯ ಮೂಲಕ ಕನ್ನಡ ನಾಡು, ನುಡಿಯ ರಕ್ಷಣೆಯನ್ನು ಮಾಡುತ್ತಾ, ನಾಡಪರ ಹೋರಾಟಗಳನ್ನು ಮಾಡುವುದರ ಜೊತೆಗೆ ವಿವಿಧ ಸಾಮಾಜಿಕ ಕಳಕಳಿಯುಳ್ಳ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಗ್ರಾಮಸ್ಥರು ಆರೋಗ್ಯ ಶಿಬಿರಗಳ ಸದುಪಯೋಗಪಡಿಸಿಕೊಳ್ಳುವಂತೆ ಹೇಳಿದರು.
ಉಚಿತ ನೇತ್ರ ತಪಾಸಣೆ ಶಿಬಿರದೊಂದಿಗೆ ಶಸ್ತ್ರ ಚಿಕಿತ್ಸಾ ಶಿಬಿರ, ಕಣ್ಣಿನ ಪೊರೆ ಮತ್ತು ಇತರೆ ಕಣ್ಣಿನ ತೊಂದರೆಗಳಿಗೆ ಚಿಕಿತ್ಸೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ವೆಂಕಟರೋಣಪ್ಪ, ಜಿಲ್ಲಾ ಉಪಾದ್ಯಕ್ಷ ರವಿ, ತಾಲ್ಲೂಕು ಸಂಚಾಲಕ ದೇವರಾಜು(ದೇವಿ), ಅಕ್ರಂ, ಮುನಿರಾಜು(ಕುಟ್ಟಿ),ವೀರಾಪುರ ಘಟಕದ ಅದ್ಯಕ್ಷ ಮಣಿಕಂಠ, ವೆಂಕಟೇಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!