19.1 C
Sidlaghatta
Tuesday, December 23, 2025

ಎರಡನೇ ವರ್ಷದ ವಿಶ್ವಕರ್ಮ ಜಯಂತಿ ಆಚರಣೆ

- Advertisement -
- Advertisement -

ಶೈಕ್ಷಣಿಕ ಮತ್ತು ಆರ್ಥಿಕವಾಗಿ ಜನಾಂಗದ ಅಭಿವೃದ್ಧಿಗೆ ಸಮುದಾಯದ ಮುಖಂಡರು ಶ್ರಮಿಸಬೇಕು ಎಂದು ತಹಸೀಲ್ದಾರ್ ಎಸ್.ಅಜಿತ್‍ಕುಮಾರ್‍ರೈ ಹೇಳಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಭಾನುವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನಡೆದ ಎರಡನೇ ವರ್ಷದ ವಿಶ್ವಕರ್ಮ ಜಯಂತಿ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ವಿಶೇಷ ಕುಸುರಿ ಕೌಶಲ ಹೊಂದಿರುವ ವಿಶ್ವಕರ್ಮ ಜನಾಂಗವು ವಿಶ್ವ ಮಾನ್ಯತೆ ಪಡೆದಿದೆ. ವಿಶ್ವಕರ್ಮ ಸಮುದಾಯವು ಚಿನ್ನಬೆಳ್ಳಿ ಕೆಲಸ, ಮರಗೆಲಸ, ಕಬ್ಬಿಣದ ಕೆಲಸ, ಶಿಲ್ಪಕಲೆ ಸೇರಿದಂತೆ ಪಂಚ ಕಸುಬುಗಳನ್ನು ಮಾಡುವ ಮೂಲಕ ಸಮಾಜಕ್ಕೆ ಅಪಾರ ಕೊಡುಗೆ ನೀಡಿದೆ ಎಂದರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಭಾನುವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನಡೆದ ಎರಡನೇ ವರ್ಷದ ವಿಶ್ವಕರ್ಮ ಜಯಂತಿಯಲ್ಲಿ ತಹಸೀಲ್ದಾರ್ ಎಸ್.ಅಜಿತ್‍ಕುಮಾರ್‍ರೈ ಹಾಗು ಶಾಸಕ ಎಂ.ರಾಜಣ್ಣರನ್ನು ಸಮುದಾಯದ ಮುಖಂಡರು ಸನ್ಮಾನಿಸಿ ಗೌರವಿಸಿದರು.

ಕಾರ್ಯಕ್ರಮದ ಮುಖ್ಯಭಾಷಣಕಾರರಾಗಿ ಸಿ.ಆರ್.ಪಿ. ಮಂಜುನಾಥ್ ಮಾತನಾಡಿ ದೇಶದಲ್ಲಿ ಸಾಮಾಜಿಕ ನ್ಯಾಯವಿಲ್ಲದಿದ್ದರೆ ಭಾರತ ದೇಶ ಪ್ರಗತಿ ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ, ವಿಶ್ವಕರ್ಮ ಎನ್ನುವುದು ಜಾತಿಯಲ್ಲ. ಇದೊಂದು ಸಂಸ್ಕೃತಿ, ಪಾರಂಪರಿಕ ಸಂಸ್ಕೃತಿಯುಳ್ಳ ಪಂಚ ಕಸಬುಗಳು ದೇಶಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದೇವೆ. ಆದರೂ ಎಲ್ಲಾ ರಂಗದಲ್ಲೂ ಹಿಂದೆ ಉಳಿದಿದ್ದೇವೆ. ವಿಶ್ವಕರ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಅಜಿತ್ ಕುಮಾರ್ ರೈ ಹಾಗು ಶಾಸಕ ಎಂ.ರಾಜಣ್ಣರನ್ನು ಸಮುದಾಯದ ಮುಖಂಡರು ಸನ್ಮಾನಿಸಿ ಗೌರವಿಸಿದರು.
ಶಾಸಕ ಎಂ.ರಾಜಣ್ಣ, ನಗರಸಭಾ ಅಧ್ಯಕ್ಷ ಅಪ್ಸರ್‍ಪಾಷ, ಉಪಾಧ್ಯಕ್ಷೆ ಪ್ರಭಾವತಿಸುರೇಶ್, ತಾ.ಪಂ ಇಓ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್‍ಬಾಬು, ಶಿಶು ಕಲ್ಯಾಣಾಧಿಕಾರಿ ಲಕ್ಷ್ಮೀದೇವಮ್ಮ, ಸಮುದಾಯದ ಹಿರಿಯ ಮುಖಂಡರಾದ ಮುನಿರತ್ನಾಚಾರಿ, ಸುಂದರಾಚಾರಿ, ಜನಾರ್ಧನ್, ಈಶ್ವರಾಚಾರಿ, ಸಿ.ಆರ್.ಪಿ.ಸುಂದರಾಚಾರಿ ಮತ್ತಿತರರು ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!