ನಗರದ ಹೊರವಲಯದ ಎಸ್ ಆರ್ ಸಿಟಿಜನ್ ಸ್ಕೂಲ್ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಎಸ್ ಆರ್ ಸಿಟಿಜನ್ ಸ್ಕೂಲ್ ಅಧ್ಯಕ್ಷ ಎಸ್.ರಾಮಚಂದ್ರರೆಡ್ಡಿ ಮಾತನಾಡಿದರು.
ಮಕ್ಕಳಲ್ಲಿ ಮಾನವೀಯ ಮೌಲ್ಯವನ್ನು ಎಳೆಯ ವಯಸ್ಸಿನಲ್ಲಿಯೇ ಬಿತ್ತಬೇಕು. ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ ಎಂಬ ನಾಣ್ಣುಡಿಯಂತೆ ಮಕ್ಕಳಿಗೆ ಸಣ್ಣ ಪ್ರಾಯದಲ್ಲಿಯೇ ಶಿಕ್ಷಣದೊಂದಿಗೆ ಸಂಸ್ಕಾರ ನೀಡುವ ಪ್ರಯತ್ನ ನಮ್ಮದು ಎಂದು ಅವರು ತಿಳಿಸಿದರು.
ಶಿಕ್ಷಕರ ಉತ್ತಮ ಮಾರ್ಗದರ್ಶನದಿಂದ ಮಕ್ಕಳು ಸಂಸ್ಕಾರವಂತರಾಗಿ ರೂಪುಗೊಳ್ಳುತ್ತಾರೆ. ಹಿರಿಯರ ನಡೆಯನ್ನು ಮಕ್ಕಳು ಅನುಸರಿಸುವುದರಿಂದ ಶಿಕ್ಷಕರು ಮತ್ತು ಪೋಷಕರ ಜವಾಬ್ದಾರಿ ಹೆಚ್ಚಿನದಾಗಿದೆ. ವಿದ್ಯಾರ್ಥಿಗಳಿಗೆ ಸೌಜನ್ಯ, ಪ್ರೀತಿ, ಸಹಬಾಳ್ವೆ, ಜೀವನದ ಅಂಶಗಳನ್ನು ಕಲಿಸಿ ನಾಡಿನ ಸುಸಂಸ್ಕೃತ ಪ್ರಜೆಗಳನ್ನಾಗಿ ರೂಪಿಸುವುದು ಅತ್ಯಗತ್ಯವಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ಯೋಗ, ವ್ಯಾಯಾಮ, ಸದ್ಗುಣಗಳನ್ನು ಸಹ ಮಕ್ಕಳಿಗೆ ಕಲಿಸಬೇಕಾಗ ಅಗತ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲೆಯ ವತಿಯಿಂದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ನಗರಸಭಾ ಸದಸ್ಯ ಎಸ್.ರಾಘವೇಂದ್ರ, ಕೆ.ವೇಣುಗೋಪಾಲ್. ನಾಗರಾಜ್, ಮುಖ್ಯ ಶಿಕ್ಷಕ ಶಿವಣ್ಣ ಹಾಜರಿದ್ದರು.
- Advertisement -
- Advertisement -
- Advertisement -