29.2 C
Sidlaghatta
Friday, February 20, 2026

ಎಸ್.ಎಸ್.ಎಲ್.ಸಿ ಫಲಿತಾಂಶ ಉತ್ತಮಪಡಿಸಲು ಸಲಹೆ

- Advertisement -
- Advertisement -

ತಾಲ್ಲೂಕಿನ ಪ್ರೌಢಶಾಲೆಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಶಿಕ್ಷಕರು ಶ್ರಮಿಸಬೇಕು ಎಂದು ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಬೈರಾರೆಡ್ಡಿ ಕರೆನೀಡಿದರು.
ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಭಾನುವಾರ ಪ್ರೌಢಶಾಲಾ ಸಹಶಿಕ್ಷಕರ ಸಂಘವು ಹಮ್ಮಿಕೊಂಡಿದ್ದ ಪದಾಧಿಕಾರಿಗಳ ಸಭೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ಫಲಿತಾಂಶ ಉತ್ತಮಪಡಿಸುವಲ್ಲಿ ಶಿಕ್ಷಕರ ಪಾತ್ರವು ಮಹತ್ವದ್ದು ಎಂದರು.
ಸಂಘದ ಕಾರ್ಯದರ್ಶಿ ಎಲ್.ವಿ.ವೆಂಕಟರೆಡ್ಡಿ ಮಾತನಾಡಿ, ಜನವರಿ ೨೩ ರಿಂದ ಎಲ್ಲಾ ವಿಷಯಗಳ ಬೋಧಕರಿಗೆ ಶಿಡ್ಲಘಟ್ಟದಲ್ಲಿ ಸಮಾಲೋಚನ ಸಭೆ ನಡೆಸಿ ಕನಿಷ್ಟ ಕಲಿಕೆಯ ಮಕ್ಕಳಲ್ಲಿ ಕಲಿಕೆಯನ್ನು ಉತ್ತಮಪಡಿಸಲು ತರಬೇತಿ ನಡೆಸಲಾಗುವುದು. ಅದೇ ಸಂದರ್ಭದಲ್ಲಿ ಕನಿಷ್ಟ ಕಲಿಕೆಯ ಮಕ್ಕಳಿಗೆ ಅನುಕೂಲವಾಗುವಂತೆ ಕಲಿಕಾಸಾಮಗ್ರಿ ವಿತರಿಸಲು ತೀರ್ಮಾನಿಸಲಾಗಿದೆ ಎಂದರು.
ಚಿಕ್ಕಬಳ್ಳಾಪುರ ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಉಪಾಧ್ಯಕ್ಷ ಕೆಂಪಣ್ಣ ಮಾತನಾಡಿ, ಎಸ್ಎಸ್ಎಲ್ಸಿ ಮಕ್ಕಳಿಗೆ ಅನುಕೂಲವಾಗಿ ರಾಜ್ಯಸಂಘವು ಹೊರತಂದಿರುವ ಚಟುವಟಿಕೆಗಳ ಕೈಪಿಡಿಯನ್ನು ಶಿಕ್ಷಕರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಸಂಘವು ಹೊರತಂದಿರುವ ನೂತನ ವರ್ಷದ ದಿನದರ್ಶಿಕೆಯನ್ನು ಬಿಡುಗಡೆ ಮಾಡಲಾಯಿತು. ಎಸ್ಎಸ್ಎಲ್ಸಿ ಸಿಲಬಸ್ ಆಧಾರಿತ ಚಟುವಟಿಕೆಗಳ ಕೈಪಿಡಿಗಳನ್ನು ವಿತರಿಸಲಾಯಿತು.
ಜಿಲ್ಲಾ ಸಂಘದ ಪ್ರತಿನಿಧಿ ಟಿ.ವಿ.ಚಂದ್ರಶೇಖರ್, ಉಪಾಧ್ಯಕ್ಷೆ ಇಂದಿರಾ, ನಡಿಪಿನಾಯಕನಹಳ್ಳಿಯ ನವೋದಯ ಪ್ರೌಢಶಾಲೆಯ ಮುಖ್ಯಶಿಕ್ಷಕ ಸತ್ಯನಾರಾಯಣ್, ಸಂಘದ ಪದಾಧಿಕಾರಿಗಳು, ನಿರ್ದೇಶಕರು ಉಪಸ್ಥಿತರಿದ್ದರು. ಸಂಘದ ಸಹಕಾರ್ಯದರ್ಶಿ ಎಚ್.ಎಸ್.ರುದ್ರೇಶಮೂರ್ತಿ, ಸಂಘಟನಾ ಕಾರ್ಯದರ್ಶಿ ನವೀನ್ಕುಮಾರ್ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!