ನಗರದ ತಾಲ್ಲೂಕು ಕಚೇರಿ ಮುಂದೆ ರೈತ ನಾಯಕ ಪ್ರೊ.ನಂಜುಂಡಸ್ವಾಮಿ ಸ್ಥಾಪಿತ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಭಾನುವಾರ ಯುವಶಕ್ತಿ ಸಂಘಟನೆಯ ಪದಾಧಿಕಾರಿಗಳೊಂದಿಗೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿ ಯುವಶಕ್ತಿ ಸಂಘಟನೆಯ ವಿಜಯಬಾವರೆಡ್ಡಿ ಮಾತನಾಡಿದರು.
ತಾಲ್ಲೂಕಿನಲ್ಲಿ ಎಪಿಎಂಸಿ ಮಾರುಕಟ್ಟೆಗೆ ಸ್ಥಳ ನಿಗಧಿಗೊಳಿಸುವುದು ಸೇರಿದಂತೆ ಕೊಳಚೆ ನಿವಾಸಿಗಳಿಗೆ ಕೂಡಲೇ ಮನೆಗಳನ್ನು ನಿರ್ಮಿಸಿಕೊಡುವ ಕೆಲಸಕ್ಕೆ ಅಧಿಕಾರಿಗಳು ಮುಂದಾಗಬೇಕು. ರೈತರ ಬೇಡಿಕೆಗಳನ್ನು ಈಡೇರಿಸಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ವಿಫಲವಾದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕೈಗೊಳ್ಳುವ ಹೋರಾಟದಲ್ಲಿ ಯುವಶಕ್ತಿ ಸಂಘಟನೆ ಕೈ ಜೋಡಿಸುವ ಮೂಲಕ ಬೆಂಬಲಿಸಲಾಗುತ್ತದೆ ಎಂದರು.
ತಾಲ್ಲೂಕಿನ ರೈತರ ಅಗತ್ಯ ಮೂಲಭೂತ ಅವಶ್ಯಕತೆಯಾದ ಕೃಷಿ ಉತ್ಪನ್ನ ಮಾರುಕಟ್ಟೆ ಈವರೆಗೂ ನಿರ್ಮಾಣಮಾಡದೇ ಇರುವುದು ಜನಪ್ರತಿನಿಧಿಗಳ ಹಾಗು ಅಧಿಕಾರಿಗಳ ವೈಪಲ್ಯಕ್ಕೆ ಸಾಕ್ಷಿಯಂತಿದೆ ಎಂದು ಅವರು ತಿಳಿಸಿದರು.
ಯುವಶಕ್ತಿ ಸಂಘಟನೆಯ ಶಿವಪ್ರಕಾಶ್ರೆಡ್ಡಿ, ಹಿರೇಬಲ್ಲ ರಾಘವೇಂದ್ರ, ಕ್ಯಾಲನೂರು ಸುಬ್ರಮಣಿ, ಗಟ್ಟೂರು ಮಂಜುನಾಥ್, ಲೋಕೇಶ್ ರೆಡ್ಡಿ, ರೈತಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಸುಷ್ಮಾ ಶ್ರೀನಿವಾಸ್, ಜಿ.ನಾರಾಯಣಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎನ್.ವೆಂಕಟಲಕ್ಷ್ಮಯ್ಯ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







