ಕಂದಾಯ ಇಲಾಖೆ ಮಾಹಿತಿಯನ್ನೊಳಗೊಂಡ ದಿನಚರಿ ಬಿಡುಗಡೆ

- Advertisement -
- Advertisement -

ತಾಲ್ಲೂಕಿನ ಹಂಡಿಗನಾಳದ ವೀರಣ್ಣ ಕೆಂಪಣ್ಣ ಕಲ್ಯಾಣಮಂಟಪದಲ್ಲಿ ಗುರುವಾರ ಸಂಜೆ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘ ಹಾಗೂ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘ ಶಿಡ್ಲಘಟ್ಟ ಶಾಖೆಯ ವತಿಯಿಂದ ಆಯೋಜಿಸಿದ್ದ ೨೦೧೯ ನೇ ಸಾಲಿನ ದಿನಚರಿ ಬಿಡುಗಡೆ ಸಮಾರಂಭದಲ್ಲಿ ದಿನಚರಿ ಬಿಡುಗಡೆ ಮಾಡಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಮಾತನಾಡಿದರು.
ಜಿಲ್ಲೆಯಲ್ಲಿಯೇ ಪ್ರಪ್ರಥಮವಾಗಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನೊಳಗೊಂಡ ದಿನಚರಿಯನ್ನು ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಬಿಡುಗಡೆ ಮಾಡುತ್ತಿರುವುದು ಅನುಕರಣೀಯವಾಗಿದೆ ಎಂದು ಅವರು ತಿಳಿಸಿದರು.
ಕೆಲಸಗಳನ್ನು ವ್ಯವಸ್ಥಿತವಾಗಿ ಮಾಡುವವರು, ಜೀವನದಲ್ಲಿ ಗುರಿ, ದಿಕ್ಕು, ಮಾರ್ಗ ಇರುವವರು ದಿನಚರಿಯನ್ನು ಬಳಸುತ್ತಾರೆ. ದಿನಚರಿಯ ಪ್ರಾಮುಖ್ಯತೆಯನ್ನು ಅರಿತು ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಮಾಡುವವರಿಗೆ ಅಗತ್ಯ ಮಾಹಿತಿಯನ್ನೊಳಗೊಂಡಂತೆ ದಿನಚರಿ ಪುಸ್ತಕವನ್ನು ಮಾಡಿರುವುದು ಬಹಳ ಉಪಯುಕ್ತವಾಗಿದೆ. ಜಿಲ್ಲಾ ಮಟ್ಟದಲ್ಲೂ ಈ ರೀತಿಯ ಕಾರ್ಯಗಳ ಅಗತ್ಯವಿದೆ ಎಂದರು.
ಗ್ರಾಮ ಲೆಕ್ಕಿಗರಿಗೆ ಮತ್ತು ಆರ್ ಐ ಗಳಿಗೆ ಜಾಬ್ ಚಾರ್ಟ್ ಅಗತ್ಯವಿದೆ. ಅವರಿಗೆ ಸೌಲಭ್ಯಗಳ ಕೊರತೆಯಿರುವುದನ್ನು ಗಮನಕ್ಕೆ ತಂದಿದ್ದಾರೆ. ಅವರು ಅತ್ಯುತ್ತಮಮವಾಗಿ ಕಾರ್ಯನಿರ್ವಹಿಸಲು ಅಗತ್ಯ ಸೌಲಭ್ಯವನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಆರತಿ ಆನಂದ್ ಮಾತನಾಡಿ, ಗ್ರಾಮ ಲೆಕ್ಕಿಗರಿಗೆ, ಆರ್ ಐ ಗಳಿಗೆ ಹಾಗೂ ಇತರ ಅಧಿಕಾರಿಗಳಿಗೆ ಕಾರ್ಯಾಗಾರಗಳನ್ನು ನಡೆಸುವ ಮೂಲಕ ಅವರ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು. ಸಮಾಜ ಕಂದಾಯ ಇಲಾಖೆಯ ಕಾರ್ಯವೈಖರಿಯ ಮೇಲೆ ಹೆಚ್ಚಿನ ಗಮನವಿರಿಸುವುದರಿಂದ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ನುಡಿದರು.
ತಹಶಿಲ್ದಾರ್ ಅಜಿತ್ ಕುಮಾರ್ ರೈ ಮಾತನಾಡಿ, ಇಲಖೆಯ ಎರಡೂ ಸಂಘಗಳಲ್ಲಿ ಒಗ್ಗಟ್ಟಿದ್ದಾಗ ಮಾತ್ರ ಈ ರೀತಿಯ ಮಾಹಿತಿಯುಕ್ತ ದಿನಚರಿ ಮಾಡಲು ಸಾಧ್ಯವಿದೆ. ಜಿಲ್ಲೆಯಲ್ಲಿಯೇ ಶಿಡ್ಲಘಟ್ಟದಲ್ಲಿ ದಿನಚರಿ ಪುಸ್ತಕ ಪ್ರಥಮವಾಗಿ ರೂಪಿಸಿದ ಹೆಮ್ಮೆಯಿದೆ ಎಂದರು.
ಈ ಸಂದರ್ಭದಲ್ಲಿ ವಯೋ ನಿವೃತ್ತಿ ಹೊಂದಲಿರುವ ಅಧಿಕಾರಿಗಳಾದ ಎನ್.ನರಸಿಂಹಯ್ಯ, ಡಿ.ಲಕ್ಷ್ಮಿನಾರಾಯಣರೆಡ್ಡಿ, ಮುನಿಶಾಮಪ್ಪ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಇಲಾಖೆಯ ನೌಕರರ ಮಕ್ಕಳಿಗೆ ಹಾಗೂ ಸೇನೆಯಿಂದ ನಿವೃತ್ತರಾಗಿ ಕಂದಾಯ ಇಲಾಖೆಗೆ ಸೇರಿರುವ ಕುಬೇರ, ಶಿವರಾಮ್ ಅವರನ್ನು ಸನ್ಮಾನಿಸಲಾಯಿತು.
ಚಿಕ್ಕಬಳ್ಳಾಪುರ ತಹಶೀಲ್ದಾರ್ ನರಸಿಂಹಮೂರ್ತಿ, ಗುಡಿಬಂಡೆ ತಹಶೀಲ್ದಾರ್ ಹನುಮಂತರಾಯಪ್ಪ, ಚಿಂತಾಮಣಿ ತಹಶೀಲ್ದಾರ್ ವಿಶ್ವನಾಥ್, ಶಿಡ್ಲಘಟ್ಟ ಗ್ರೇಡ್ ೨ ತಹಶೀಲ್ದಾರ್ ಹನುಮಂತರಾವ್, ಕಂದಾಯ ಇಲಾಖೆಯ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಜಿ.ವಿಶ್ವನಾಥ್, ಡಿ.ಆರ್.ಪ್ರೀತಮ್, ಜಿ.ಎಂ.ಮಂಜುನಾಥ್, ಗ್ರಾಮ ಲೆಕ್ಕಿಗರ ಸಂಘದ ತಾಲ್ಲೂಕು ಅಧ್ಯಕ್ಷ ಆರ್.ನಾಗೇಂದ್ರ, ತ್ರಿಮೂರ್ತಿ ಕಡಿಮನಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!