30.4 C
Sidlaghatta
Saturday, February 28, 2026

ಕನ್ನಡ ರಾಜ್ಯೋತ್ಸವ

- Advertisement -
- Advertisement -

ನಗರದ ಸಮಾನ ಮನಸ್ಕರ ಹೋರಾಟ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ 61 ನೇ ಕನ್ನಡ ರಾಜ್ಯೋತ್ಸವ ಹಾಗು ಕನ್ನಡ ಸಿರಿ ಹಬ್ಬ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ಹಾಗು ಮೆರವಣಿಗೆಗೆ ಚಾಲನೆ ನೀಡಿ ಕನ್ನಡ ನಾಡು, ನುಡಿಯ ರಕ್ಷಣೆ ಹಾಗೂ ಗಡಿಭಾಗಗಳ ರಕ್ಷಣೆ ಪ್ರತಿಯೊಬ್ಬ ಯುವಕರ ಆದ್ಯ ಕರ್ತವ್ಯವೆಂದು ಶಾಸಕ ಎಂ.ರಾಜಣ್ಣ ಮಾತನಾಡಿದರು.
ರಾಜ್ಯದ ಗಡಿ, ನೆಲ, ಜಲ, ಭಾಷೆ, ಸಂಸ್ಕøತಿ, ಪರಂಪರೆಯನ್ನು ಉಳಿಸಿಬೆಳೆಸುವಂತಹ ಹೊಣೆಗಾರಿಕೆ ಪ್ರತಿಯೊಬ್ಬ ನಾಗರೀಕರ ಮೇಲಿದೆ. ಅದರಲ್ಲೂ ವಿಶೇಷವಾಗಿ ಯುವಜನತೆ ನಾಡಿನ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಕೆಲಸ ಮಾಡಬೇಕಾಗಿದೆ ಎಂದರು.

ನಗರದ ಸಮಾನ ಮನಸ್ಕರ ಹೋರಾಟ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ 61 ನೇ ಕನ್ನಡ ರಾಜ್ಯೋತ್ಸವ ಹಾಗು ಕನ್ನಡ ಸಿರಿ ಹಬ್ಬ ಕಾರ್ಯಕ್ರಮದಲ್ಲಿ ವೀರಗಾಸೆ, ಗಾರುಡಿಗೊಂಬೆ ಮುಂತಾದ ಕಲಾತಂಡಗಳು ತಮಟೆ ನಾದದೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದುದು ನೋಡುಗರ ಮನಸೆಳೆಯುವಂತಿತ್ತು.
ನಗರದ ಸಮಾನ ಮನಸ್ಕರ ಹೋರಾಟ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ 61 ನೇ ಕನ್ನಡ ರಾಜ್ಯೋತ್ಸವ ಹಾಗು ಕನ್ನಡ ಸಿರಿ ಹಬ್ಬ ಕಾರ್ಯಕ್ರಮದಲ್ಲಿ ವೀರಗಾಸೆ, ಗಾರುಡಿಗೊಂಬೆ ಮುಂತಾದ ಕಲಾತಂಡಗಳು ತಮಟೆ ನಾದದೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದುದು ನೋಡುಗರ ಮನಸೆಳೆಯುವಂತಿತ್ತು.

ರಾಜ್ಯೋತ್ಸವದ ಅಂಗವಾಗಿ ನಾಡಿನ ಹಿರಿಮೆ ಗರಿಮೆಗಳನ್ನು ಸಾರುವ ಸ್ತಬ್ಧ ಚಿತ್ರಗಳು ಸೇರಿದಂತೆ ವೇಷಭೂಷಣಗಳು, ಜಾನಪದ ಕಲಾ ಪ್ರದರ್ಶನ, ಮಂಗಳ ವಾದ್ಯಗಳೊಡನೆ ಭುವನೇಶ್ವರಿಯ ಮೆರವಣಿಗೆಯನ್ನು ಆಯೋಜಿಸಲಾಗಿತ್ತು.
ತಾಲ್ಲೂಕಿನ ವಿವಿದೆಡೆಯಿಂದ ಬಂದಿದ್ದ ಅಲಂಕೃತವಾದ ಟ್ರಾಕ್ಟರ್‍ಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ವೀರಗಾಸೆ, ಗಾರುಡಿಗೊಂಬೆ ಮುಂತಾದ ಕಲಾತಂಡಗಳು ತಮಟೆ ನಾದದೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದುದು ವಿಶೇಷವಾಗಿತ್ತು.
ಮೆರವಣಿಗೆಯಲ್ಲಿ ತಹಸೀಲ್ದಾರ್ ಕೆ.ಎಂ. ಮನೋರಮಾ, ತಾ.ಪಂ ಇಓ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ರಘುನಾಥರೆಡ್ಡಿ, ಜಿ.ಪಂ ಸದಸ್ಯ ಬಂಕ್ ಮುನಿಯಪ್ಪ, ತಾ.ಪಂ ಅಧ್ಯಕ್ಷ ಲಕ್ಷ್ಮಿನಾರಾಯಣ, ನಗರಸಭೆ ಅಧ್ಯಕ್ಷ ಅಪ್ಸರ್ ಪಾಷ, ಸಮಾನ ಮನಸ್ಕರ ಹೋರಾಟ ಸಮಿತಿಯ ಜೆ.ಎಸ್. ವೆಂಕಟಸ್ವಾಮಿ, ಎ.ಎಂ. ತ್ಯಾಗರಾಜು, ಪುರುಷೋತ್ತಮ್, ಕರವೇ ತಾಲೂಕು ಅಧ್ಯಕ್ಷ ಶ್ರೀಧರ್, ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ರವಿಕುಮಾರ್, ಕಾರ್ಯದರ್ಶಿ ಪ್ರತೀಶ್, ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!