ಆರ್ ಟಿಇ ಕಾಯ್ದೆಯ ಅಂಶಗಳನ್ನು ಯಶಸ್ವಿಯಾಗಿ ಜಾರಿಗೆ ತರಲು ಪೋಷಕರು, ಶಿಕ್ಷಕರು ಹಾಗೂ ಸಮುದಾಯ ಹೆಚ್ಚು ಶ್ರಮ ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ ಕರೆ ನೀಡಿದರು.
ತಾಲ್ಲೂಕಿನ ಕನ್ನಮಂಗಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಆರ್ಟಿಇ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಕೆ.ಸುಮಾ ಮಾತನಾಡಿ, ೬-೧೪ ವರ್ಷದ ಎಲ್ಲಾ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ದೊರಕಿಸಲು ಎಲ್ಲರೂ ಬದ್ಧರಾಗಿರಬೇಕು ಎಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಂ.ಜಿ. ಗೋಪಾಲ್, ಸರ್ಕಾರಿ ಶಾಲೆಗಳಲ್ಲಿನ ಮಕ್ಕಳು ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಕನ್ನಮಂಗಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ‘ಉತ್ತಮಶಾಲೆ’ಎಂದು ಪುರಸ್ಕರಿಸಲಾಯಿತು. ಶಾಲೆಯ ಎಸ್.ಡಿ.ಎಂ.ಸಿ.ಯ ಹಿಂದಿನ ಪದಾಧಿಕಾರಿಗಳಾದ ವೆಂಕಟೇಶ್, ಮುನಿನಾರಾಯಣಪ್ಪ, ಮುನಿರಾಜಗೌಡ, ನಾಗರಾಜ್ ಅವರನ್ನು ಸನ್ಮಾನಿಸಲಾಯಿತು. ಶಾಮಂತಿ ಮಕ್ಕಳ ಗ್ರಂಥಾಲಯವನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮಕ್ಕೆ ಮುನ್ನ ಗ್ರಾಮದಲ್ಲಿ ಆರ್ಟಿಇ ಬಗ್ಗೆ ಜಾಗೃತಿ ಮಾಡಿಸಲು ಮಕ್ಕಳು, ಶಿಕ್ಷಕರು ಹಾಗೂ ಎಸ್.ಡಿ.ಎಂ.ಸಿ. ಸದಸ್ಯರು ಜಾಥಾ ನಡೆಸಿದರು.
ಎಸ್.ಡಿ.ಎಂ.ಸಿ. ಅಧ್ಯಕ್ಷ ಮುನಿಆಂಜನಪ್ಪ, ಗ್ರಾಮ ಪಂಚಾಯತಿ ಅಧ್ಯಕ್ಷ ವಿಜಯಮ್ಮ ಕದಿರಪ್ಪ, ಸದಸ್ಯರಾದ ದೇವರಾಜ್, ಸರೋಜಮ್ಮ ನಾಗರಾಜ್, ಸ್ನೇಹ ಯುವಕರ ಸಂಘದ ಅಧ್ಯಕ್ಷ ವಸಂತಕುಮಾರ್, ಐನಾ ಸಂಸ್ಥೆಯ ವೆರೋನಿಕ ಡೇವಿಡ್, ಮಕ್ಕಳ ಪರಿವೀಕ್ಷಣಾಧಿಕಾರಿ ರಾಮೇಗೌಡ, ಆರ್ಟಿಇ ಕಾರ್ಯಪಡೆಯ ಜೆ. ಸತೀಶ್, ಶಾಲೆಯ ಮುಖ್ಯ ಶಿಕ್ಷಕ ಎಚ್. ಮುನಿಯಪ್ಪ, ಸಹಶಿಕ್ಷಕರಾದ ಕೆ. ಶಿವಶಂಕರ, ಜೆ. ಶ್ರೀನಿವಾಸ, ಎಸ್. ಕಲಾಧರ, ಟಿ.ಜೆ. ಸುನೀತ ಹಾಗೂ ಅಂಗನವಾಡಿ ಶಿಕ್ಷಕಿ ಎನ್. ಪದ್ಮಾವತಿ ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -







