ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ದಲಿತರ ನಿರ್ಲಕ್ಷ್ಯ ಖಂಡಿಸಿ ಧರಣಿ

- Advertisement -
- Advertisement -

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಘೋಷ್ಠಿ ನಡೆಸಿ ಮಾತನಾಡಿದ ಕದಸಂಸ ಜಿಲ್ಲಾ ಸಂಚಾಲಕ ಮೇಲೂರು ಮಂಜುನಾಥ್ ರವರು. ರಾಜ್ಯಾದ್ಯಂತ ಕಳೆದ ಮೂವತ್ತೈದು ವರ್ಷಗಳಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ದಲಿತರ, ಶೋಷಿತರ ಪರವಾಗಿ ವಿವಿಧ ಹೋರಾಟಗಳನ್ನು ಮಾಡುತ್ತಾ ಬಂದಿದೆ. ತಾಲ್ಲೂಕಿನ ಜನಪ್ರತಿನಿಧಿಗಳು ಮತ್ತು ತಾಲ್ಲೂಕು ಆಡಳಿತದ ನಿರ್ಲಕ್ಷ್ಯದಿಂದ ಈವರೆಗೂ ತಾಲ್ಲೂಕು ಕೇಂದ್ರ ಸ್ಥಾನದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗಿಲ್ಲ.
ತಾಲ್ಲೂಕು ಕೇಂದ್ರ ಸ್ಥಾನದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡುವುದೂ ಹಾಗೂ ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ತಾಲ್ಲೂಕು ಆಡಳಿತದ ಕಾರ್ಯವೈಖರಿ ಖಂಡಿಸಿ ಇದೇ ಅಕ್ಟೋಬರ್‌ ೨೨ ರ ಸೋಮವಾರ ಒಂದು ದಿನದ ಧರಣಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ಮೂರು ತಿಂಗಳಿಗೊಮ್ಮೆ ದಲಿತರ ಕುಂದು ಕೊರತೆ ಸಭೆ ಆಯೋಜನೆ ಮಾಡಬೇಕು ಎಂಬ ಸರ್ಕಾರದ ನಿರ್ದೇಶನವಿದ್ದರೂ ತಹಶೀಲ್ದಾರ್ ಎಸ್.ಅಜಿತ್‌ಕುಮಾರ್ ರೈ ಈವರೆಗೂ ಯಾವುದೇ ದಲಿತ ಕುಂದುಕೊರತೆ ಸಭೆ ನಡೆಸಿಲ್ಲ. ಈ ಬಗ್ಗೆ ಹಲವಾರು ಭಾರಿ ತಹಶೀಲ್ದಾರರಿಗೆ ಮನವಿ ಮಾಡಲಾಗಿದ್ದರೂ ದಲಿತರ ವಿರೋಧಿ ನೀತಿ ಅನುಸರಿಸುವ ಮೂಲಕ ತಮ್ಮ ಕರ್ತವ್ಯವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.
ತಾಲ್ಲೂಕಿನ ಪೊಲೀಸ್ ಇಲಾಖೆ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ಗ್ರಾಮೀಣ ಪ್ರದೇಶದ ಸಣ್ಣ ಪುಟ್ಟ ಅಂಗಡಿಗಳಲ್ಲಿ ಮತ್ತು ದಲಿತ ಕಾಲೋನಿಗಳಲ್ಲಿ ನಡೆಯುತ್ತಿರುವ ಮದ್ಯ ಮಾರಾಟ ತಡೆಯುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅಕ್ಟೋಬರ್‌ ೨೨ ರಂದು ಸಾವಿರಾರು ಮಂದಿ ಜನರೊಂದಿಗೆ ನಗರದ ಬಸ್ ನಿಲ್ದಾಣದ ಬಳಿಯಿಂದ ತಾಲ್ಲೂಕು ಕಚೇರಿಯವರೆಗೂ ಬೃಹತ್ ಮೆರವಣಿಗೆ ಮೂಲಕ ಸಾಗಿ ತಾಲ್ಲೂಕು ಕಚೇರಿಯ ಮುಂಭಾಗ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಜಿಲ್ಲಾ ಸಂಘಟನಾ ಸಂಚಾಲಕ ದಡಂಘಟ್ಟ ತಿರುಮಲೇಶ್ ಮಾತನಾಡಿ, ತಾಲ್ಲೂಕಿನಾದ್ಯಂತ ಶೇ ೩೩ ರಷ್ಟಿರುವ ಪರಿಶಿಷ್ಠ ಜಾತಿ ಹಾಗೂ ಪಂಗಡದ ಜನತೆ ಸೂಕ್ತ ಭದ್ರತೆ ಹಾಗೂ ಸವಲತ್ತು ನೀಡುವಲ್ಲಿ ತಾಲ್ಲೂಕು ಆಡಳಿತ ಸಂಪೂರ್ಣ ವಿಫಲವಾಗಿದೆ. ಪರಿಶಿಷ್ಠ ಜಾತಿ ಹಾಗೂ ಪಂಗಡಕ್ಕೆ ಮೀಸಲಿಟ್ಟಿರುವ ಶೇ ೨೩.೫ ಅನುದಾನವನ್ನು ದಲಿತರ ಕಲ್ಯಾಣಕ್ಕೆ ಉಪಯೋಗಿಸದೇ ದುರುಪಯೋಗ ಪಡಿಸಿಕೊಂಡಿರುವ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿ ಧರಣಿ ಕಾರ್ಯಕ್ರಮ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕದಸಂಸ ಪದಾಧಿಕಾರಿಗಳೂ ಸೇರಿದಂತೆ ಜನತೆ ಧರಣಿಯಲ್ಲಿ ಪಾಲ್ಗೊಂಡು ಧರಣಿಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯ ಗೊರ್ಲೆಪ್ಪ, ತಾಲ್ಲೂಕು ಸಂಚಾಲಕ ಮುನಿ ಆಂಜಿನಪ್ಪ, ಸದಸ್ಯರಾದ ದೇವರಾಜ್, ಸುಬ್ರಮಣಿ, ದ್ಯಾವಪ್ಪ, ಎಚ್.ಕೆ.ದೇವರಾಜ್, ಯಾಮ ನಾರಾಯಣಸ್ವಾಮಿ, ಚಿಕ್ಕನರಸಿಂಹಯ್ಯ, ದೇವರಾಜ್‌ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!