Home News ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಕಣಕ್ಕೆ

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಕಣಕ್ಕೆ

0

ಕಳೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲದಿಂದ ಜಯಗಳಿಸಿ ತಮ್ಮ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ಸಲ್ಲಿಸಿದ್ದ ಸದಸ್ಯರ ವರ್ತನೆಯಿಂದ ಇದೀಗ ಮತ್ತೆ ಚುನಾವಣೆ ಎದಿರಿಸುವಂತಾಗಿದೆ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಆರ್.ಶ್ರೀನಿವಾಸ್ ತಿಳಿಸಿದರು.
ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಜಗೂರು ಗ್ರಾಮದ ಸದಸ್ಯ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯ ಸಾಮಾನ್ಯ ಮೀಸಲು ಸ್ಥಾನದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಹುಜಗೂರು ಗ್ರಾಮದ ಎಚ್.ಕೆ.ದೇವರಾಜು ಮತ್ತು ಮುನಿಶಾಮಯ್ಯ ಗುರುವಾರ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷದ ಬೆಂಬಲದೊಂದಿಗೆ ಜಯಗಳಿಸಿದ್ದ ಈ ಹಿಂದಿನ ಸದಸ್ಯರು ತಾವು ಮಾಡುವ ಅಭಿವೃದ್ಧಿ ಕೆಲಸಗಳಿಗೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಡ್ಡಿ ಪಡಿಸಿದ್ದರು ಎಂದು ಹೇಳಿರುವ ಮಾತು ಸತ್ಯಕ್ಕೆ ದೂರ. ಅವರ ವೈಯಕ್ತಿಕ ಸಮಸ್ಯೆಗಳಿಂದ ರಾಜೀನಾಮೆ ಸಲ್ಲಿಸಿ ಇದೀಗೆ ಬೇರೆ ಪಕ್ಷದ ಬೆಂಬಲದಿಂದ ಮತ್ತೆ ಚುನಾವಣೆಗೆ ಸ್ಪರ್ಧಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಎಂ.ಆಂಜಿನಪ್ಪ, ಮುಖಂಡರಾದ ಮುನಿನಾರಾಯಣಪ್ಪ, ಎಚ್.ಆರ್.ರಾಮಚಂದ್ರ, ಎಚ್.ವಿ.ನಾರಾಯಣಸ್ವಾಮಿ, ಎಹೆಚ್.ಕೆ.ಆಂಜಿನಪ್ಪ, ಎಂ.ದೇವರಾಜು, ಸಿದ್ದಪ್ಪ ಹಾಜರಿದ್ದರು.
 

error: Content is protected !!