Home News ಕಾರ್ಮಿಕರು ಐಕ್ಯತೆಯಿಂದ ಬದುಕನ್ನು ಹಸನುಮಾಡಿಕೊಳ್ಳಿ

ಕಾರ್ಮಿಕರು ಐಕ್ಯತೆಯಿಂದ ಬದುಕನ್ನು ಹಸನುಮಾಡಿಕೊಳ್ಳಿ

0

ನಮ್ಮ ನಾಡಿನ ಆರ್ಥಿಕ ಅಭಿವೃದ್ಧಿಯು ಕಾರ್ಮಿಕರ ಮೇಲೆ ಅವಲಂಬಿತವಾಗಿರುತ್ತದೆ. ದಕ್ಷತೆಯಿಂದ ಕೂಡಿದ ಕಾರ್ಮಿಕರ ವರ್ಗದಿಂದ ಮಾತ್ರ ನಾಡು ಆರ್ಥಿಕ ಪ್ರಗತಿಯನ್ನು ಸಾಧಿಸುತ್ತಿರುತ್ತದೆ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ಭಾನುವಾರ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆ ಮೂಟೆ ಹೊರುವ ಹಮಾಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಚರಿಸಿದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೈಹಿಕ ಇಲ್ಲವೇ ಬೌದ್ಧಿಕ ಶಕ್ತಿಯನ್ನು ಪ್ರದರ್ಶಿಸಿ ಕಾರ್ಮಿಕ ಆದಾಯವನ್ನು ಗಳಿಸಿ ತಮ್ಮ ಬದುಕಿನ ಬಂಡಿಯನ್ನು ಸಾಗಿಸುತ್ತಿರುತ್ತಾರೆ. ಸಂಘಟಿತರೊಂದಿಗೆ ಅಸಂಘಟಿತ ಕಾರ್ಮಿಕರು ಸೇರಿ ಐಕ್ಯತೆಯಿಂದ ಒಕ್ಕೂಟ ರಚಿಸಿ ಆ ಮೂಲಕ ತಮ್ಮ ಬದುಕನ್ನು ಹಸನಾಗಿ ಮಾಡಿಕೊಳ್ಳಬೇಕು. ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರೇಷ್ಮೆ ಗೂಡಿನ ಮೂಟೆ ಹೊರುವ ಹಿರಿಯ ಹತ್ತು ಮಂದಿ ಹಮಾಲಿ ಕಾರ್ಮಿಕರನ್ನು ಸನ್ಮಾನಿಸಲಾಯಿತು.
ನಗರದ ಮುಖ್ಯ ರಸ್ತೆಯಲ್ಲಿ ಹಮಾಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ತಮಟೆ ನಾದದೊಂದಿಗೆ ಮೆರವಣಿಗೆ ನಡೆಸಿದರು.
ರೇಷ್ಮೆ ಗೂಡಿನ ಮಾರುಕಟ್ಟೆ ಉಪನಿರ್ದೇಶಕ ಎಂ.ಎನ್.ರತ್ನಯ್ಯಶೆಟ್ಟಿ, ಸಹಾಯಕ ನಿರ್ದೇಶಕ ಬಿ.ಆರ್.ಸುಧಾಕರ್, ಜಿಲ್ಲಾ ಪಂಚಾಯತಿ ಸದಸ್ಯ ಬಂಕ್ ಮುನಿಯಪ್ಪ, ವಕೀಲ ಯೋಗಾನಂದ್, ಡಾ.ಅನಿಲ್ಕುಮಾರ್, ಕಾರ್ಮಿಕ ಇಲಾಖೆಯ ಅಧಿಕಾರಿ ವಿಶ್ವನಾಥ್, ಮಹಮ್ಮದ್ ಅನ್ವರ್, ಸಿ.ಐ.ಟಿ.ಯು ಜಿಲ್ಲಾ ಉಪಾಧ್ಯಕ್ಷ ಆಂಜನೇಯರೆಡ್ಡಿ, ಗ್ರಾಮ ಪಂಚಾಯತಿ ನೌಕರರ ಸಂಘದ ಅಧ್ಯಕ್ಷ ಸುದರ್ಶನ್, ರೈತ ಸಂಘದ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ತಾಲ್ಲೂಕು ಅಧ್ಯಕ್ಷ ರವಿಪ್ರಕಾಶ್, ಪ್ರತೀಶ್, ಅಬ್ದುಲ್ ಅಜೀಜ್, ಗುರುವಯ್ಯ ಯಾದವ್, ಹಮಾಲಿ ಕಾರ್ಮಿಕ ಸಂಘದ ಅಧ್ಯಕ್ಷ ಬಾಬಾಜಾನ್, ವೆಂಕಟರಾಯಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

error: Content is protected !!