27.3 C
Sidlaghatta
Friday, August 1, 2025

ಕಾವಲು ಸಮಿತಿ ಸದಸ್ಯರ ಜಾಗೃತಿ ಶಿಬಿರ

- Advertisement -
- Advertisement -

ಮಹಿಳೆಯರ ಮತ್ತು ಮಕ್ಕಳ ಕಳ್ಳ ಸಾಗಾಣಿಕೆಯನ್ನು ತಡೆಗಟ್ಟಲು ಕಾವಲು ಸಮಿತಿ ಸದಸ್ಯರು ಶ್ರಮಿಸಬೇಕು ಎಂದು ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್‌ಪಿ ರಾಮರತ್ನ ಕುಮಾರ್ ತಿಳಿಸಿದರು.
ನಗರದ ಸ್ತ್ರೀಶಕ್ತಿ ಭವನದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ನಿವಾರಣೆಯ ಯೋಜನೆಯಡಿ ಕಾವಲು ಸಮಿತಿ ಸದಸ್ಯರ ಜಾಗೃತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ತಮ್ಮನ್ನು ರಕ್ಷಿಸಿಕೊಳ್ಳಲು ಕೆಲವು ಕಲೆಗಳನ್ನು ಕಲಿಯಬೇಕು. ಕೆಲಸದ ಆಮಿಷ ತೋರಿಸಿ ಮಹಿಳೆಯರನ್ನು ಬೇರೆ ದೇಶಗಳಿಗೆ ಕಳ್ಳ ಸಾಗಾಣಿಕೆ ಮಾಡುತ್ತಿದ್ದು, ಈ ಬಗ್ಗೆ ಜಾಗೃತರಾಗಿರಬೇಕು.
ಮಕ್ಕಳನ್ನು ಕಳ್ಳತನ ಮಾಡಿ ಪ್ರಯೋಗದ ವಸ್ತುಗಳನ್ನಾಗಿ ಬಳಸಿಕೊಳ್ಳುತ್ತಿದ್ದಾರೆ. ಕೆಲವರು ಮಕ್ಕಳನ್ನು ಬಿಕ್ಷಾಟನೆಯನ್ನು ಬಳಸಿಕೊಂಡು ಹಣವನ್ನು ಗಳಿಸುತ್ತಿರುವರು. ಇದನ್ನು ತಡೆಗಟ್ಟುವ ಹೊಣೆ ಸಂಘ ಸಂಸ್ಥೆಗಳ, ಕಾವಲು ಸಮಿತಿ ಅಲ್ಲದೆ ಪ್ರತಿಯೊಬ್ಬ ಸಾರ್ವಜನಕರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಸಿಡಿಪಿಓ ಲಕ್ಷ್ಮಿದೇವಮ್ಮ ಮಾತನಾಡಿ, ಮಹಿಳೆಯರು ಬಸ್ಸು, ರೈಲುಗಳಲ್ಲಿ ಪ್ರಯಾಣಿಸುವಾಗ ತಮ್ಮ ತಮ್ಮ ಮಕ್ಕಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಅಪರಿಚಿತರರು ಮನೆಗಳ ಸುತ್ತ ಬಂದು ಅನುಮಾನಾಸ್ಪದ ರೀತಿಯಲ್ಲಿ ವರ್ತಿಸಿದರೆ ಅಂತಹವರ ವಿರುದ್ದ ಪೋಲಿಸ್ ಇಲಾಖೆಗೆ ದೂರು ನೀಡಬೇಕು, ಮಹಿಳೆರನ್ನು ಕಳ್ಳ ಸಾಗಾಣಿಕೆಯನ್ನು ಮಾಡಿ ಅವರನ್ನು ಲೈಂಗಿಕವಾಗಿ, ಮಾನಸಿಕವಾಗಿ ಚಿತ್ರಹಿಂಸೆ ಕೊಡುತ್ತಾರೆ. ಆದ್ದರಿಂದ ಇದನ್ನ ತಡೆಗಟ್ಟಲು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.
ತಹಶೀಲ್ದಾರ್ ವಾಸುದೇವಮೂರ್ತಿ, ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ನಿರೀಕ್ಷಕ ಆಂಜಪ್ಪ, ಶಾಲಾ ಮುಖ್ಯಶಿಕ್ಷಕರು, ಆಶಾ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸಂಘದ ಸದಸ್ಯರು ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!