20.1 C
Sidlaghatta
Friday, December 26, 2025

ಕುಡಿಯುವ ನೀರಿನ ಘಟಕದ ಉದ್ಘಾಟನೆ

- Advertisement -
- Advertisement -

ನಾಗರಿಕರ ಆರೋಗ್ಯ ದೃಷ್ಟಿಯಿಂದ ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಶುದ್ದ ನೀರಿನ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ನಗರದ ಅಶೋಕ ರಸ್ತೆಯ ದ್ವಿಮುಖ ಗಣಪತಿ ದೇವಾಲಯದ ಪಕ್ಕದಲ್ಲಿ ಸುಮಾರು ೧೦ ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶುದ್ದ ಕುಡಿಯುವ ನೀರಿನ ಘಟಕದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಕಲುಷಿತ ನೀರಿನ ಸೇವನೆಯಿಂದ ಸಾರ್ವಜನಿಕರು ವಿವಿಧ ಖಾಯಿಲೆಗಳಿಗೆ ತುತ್ತಾಗುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಶುದ್ದ ಕುಡಿಯುವ ನೀರಿನ ಘಟಕಗಳ ನಿರ್ಮಾಣಕ್ಕೆ ಮುಂದಾಗಿದ್ದು ತಾಲ್ಲೂಕಿನ ಬಹುತೇಕ ಗ್ರಾಮಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ಈಗಾಗಲೇ ಶುದ್ದ ಕುಡಿಯುವ ನೀರಿನ ಘಟಕಗಳ ಉದ್ಘಾಟನೆಯಾಗಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕು ಸೇರಿದಂತೆ ನಗರದ ಎಲ್ಲಾ ವಾರ್ಡುಗಳಲ್ಲಿಯೂ ಶುದ್ದ ನೀರಿನ ಘಟಕಗಳನ್ನುಸ್ಥಾಪಿಸಲಾಗುವುದು ಎಂದರು.
ಶುದ್ದ ನೀರಿನ ಘಟಕ ಸಾರ್ವಜನಿಕರ ಸ್ವತ್ತಾಗಿದ್ದು ಇದರ ನಿರ್ವಹಣೆ ಹಾಗೂ ಘಟಕದ ಸುತ್ತಲೂ ನೈರ್ಮಲ್ಯ ಕಾಪಾಡಲು ನಗರಸಭೆ ಅಧಿಕಾರಿಗಳು ಮತ್ತು ನಾಗರೀಕರು ಸಹಕರಿಸಬೇಕು. ಪ್ರತಿಯೊಬ್ಬರೂ ಶುದ್ದ ನೀರಿನ ಸೇವನೆಮಾಡುವುದರಿಂದ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ನಗರದ ೨೧ ನೇ ವಾರ್ಡಿನ ಸದಸ್ಯೆ ಸುಗುಣಲಕ್ಷ್ಮಿನಾರಾಯಣ ರವರು ವಾರ್ಡಿನ ಜನತೆಗೆ ಉಚಿತವಾಗಿ ಸುಮಾರು ೨೦೦ ಕುಡಿಯುವ ನೀರಿನ ಕ್ಯಾನ್ಗಳನ್ನು ವಿತರಿಸಿದರು.
ನಗರಸಭೆ ಪ್ರಭಾರಿ ಅಧ್ಯಕ್ಷೆ ಪ್ರಭಾವತಿ ಸುರೇಶ್, ಸದಸ್ಯೆ ಸುಗುಣ ಲಕ್ಷ್ಮಿನಾರಾಯಣ, ನಗರಸಭೆ ಆಯುಕ್ತ ಚಲಪತಿ, ಸದಸ್ಯರಾದ ಅಪ್ಸರ್ ಪಾಷ, ಎಸ್.ರಾಘವೇಂದ್ರ, ಕಿಷನ್, ಮುಖಂಡರಾದ ಲಕ್ಷ್ಮಿನಾರಾಯಣ (ಲಚ್ಚಿ), ಕೇಶವಣ್ಣ,ಕಸಾಪ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಗುರುರಾಜ್ರಾವ್ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!