21.4 C
Sidlaghatta
Sunday, February 22, 2026

ಕೃಷಿಹೊಂಡಕ್ಕೆ ಬೈಕ್ ಬಿದ್ದು ಸವಾರ ಸಾವು

- Advertisement -
- Advertisement -

ದ್ವಿಚಕ್ರ ವಾಹನ ಸವಾರನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ನಿರ್ಮಿಸಲಾಗುತ್ತಿರುವ ಕೃಷಿಹೊಂಡಕ್ಕೆ ಬೈಕ್ ಸಮೇತ ಬಿದ್ದು ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಶನಿವಾರ ರಾತ್ರಿ ಘಟನೆ ನಡೆದಿದೆ.
ತಾಲ್ಲೂಕಿನ ನಾಗಮಂಗಲ ಗ್ರಾಮದ ಸುಕುಮಾರ್(೨೫) ಮೃತ ದುರ್ದೈವಿಯಾಗಿದ್ದಾನೆ.
ಶನಿವಾರ ರಾತ್ರಿ ತಾಲ್ಲೂಕಿನ ಜಂಗಮಕೋಟೆಯಲ್ಲಿರುವ ತಮ್ಮ ಸಂಬಂಧಿಕರ ಮದುವೆಗೆ ಹೋಗಿ ಗ್ರಾಮಕ್ಕೆ ವಾಪಸ್ ಬರುವಾಗ ಹೊಸಪೇಟೆ ಬಳಿಯ ರಸ್ತೆಯ ಅಂಚಿನಲ್ಲಿ ನಿರ್ಮಿಸಲಾಗುತ್ತಿರುವ ಕೃಷಿಹೊಂಡವನ್ನು ಗಮನಿಸದೇ ಕೃಷಿಹೊಂಡಕ್ಕೆ ವಾಹನ ಸಮೇತ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!