ಕೃಷಿಯಲ್ಲಿ ಯಂತ್ರಗಳನ್ನು ಬಳಸಿ ಕೂಲಿ ಸಮಸ್ಯೆಯನ್ನು ನಿವಾರಿಸಿಕೊಳ್ಳುವುದಲ್ಲದೆ ಹಣವನ್ನೂ ಉಳಿಸಬಹುದಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಬಿ.ಆರ್. ಯೋಗೀಶ್ ತಿಳಿಸಿದರು.
ತಾಲ್ಲೂಕಿನ ವಲ್ಲಪ್ಪನಹಳ್ಳಿ ಗ್ರಾಮದಲ್ಲಿ ಸೋಮವಾರ ರೈತ ಸಂತೋಷ್ ಅವರ ಜಮೀನಿನಲ್ಲಿ ಕೃಷಿ ಯಂತ್ರೋಪಕರಣದ ಪ್ರಾತ್ಯಕ್ಷಿಕೆಯನ್ನು ನಡೆಸಿ ಅವರು ಮಾತನಾಡಿದರು.
ತರಕಾರಿ ಕೃಷಿಗೆ ಪೂರಕವಾಗಿ ವೈಜ್ಞಾನಿಕ ಪದ್ಧತಿಯಲ್ಲಿ ಯಂತ್ರದ ಮೂಲಕ ಏಕ ಕಾಲದಲ್ಲಿ ಬದುಮಾಡಿ, ಡ್ರಿಪ್ ಪೈಪ್, ಪೌಷ್ಠಕ ಸತ್ವ ಹಾಗೂ ಬೇಸಾಯ ಹಾಕುವ ಮೂಲಕ ಕೇವಲ ಒಬ್ಬರಿಂದಲೆ ನಿರ್ವಹಣೆ ಸಾಧ್ಯ. ಜಂಗಮಕೋಟೆ ಹೋಬಳಿಯಲ್ಲಿ ಧರ್ಮಸ್ಥಳ ಹಾಗೂ ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯ ಜಂಟಿ ಆಶ್ರಯದಲ್ಲಿ ಮಾಡಿರುವ ಕೃಷಿ ಕೇಂದ್ರವಿದೆ. ಕೇಂದ್ರದಿಂದ ರೈತರಿಗೆ ಅನುಕೂಲವಾಗುವಂತೆ ವೈಜ್ಞಾನಿಕ ಯಂತ್ರಗಳ ಮೂಲಕ ಕೃಷಿ ಮಾಡಲು ಈ ಉಪಕರಣಗಳನ್ನು ಅತ್ಯಂತ ಕಡಿಮೆ ಮೊತ್ತಕ್ಕೆ ಬಾಡಿಗೆಗೆ ನೀಡಲಾಗುತ್ತಿದೆ.
ತೋಟಗಾರಿಕೆ ಇಲಾಖೆ ತಾಲ್ಲೂಕು ಸಹಾಯಕ ಅಧಿಕಾರಿ ರವಿಕುಮಾರ್, ಪ್ರಗತಿಪರ ರೈತ ಮತ್ತು ರೈತಒಕ್ಕೂಟದ ಅಧ್ಯಕ್ಷ ಹಿತ್ತಲಹಳ್ಳಿ ಗೋಪಾಲ್ಗೌಡ. ಕೃಷಿ ಮೇಲ್ವಿಚಾರಕ ಜನಾರ್ಧನ್, ಶಾಂತಾ ಶೆಟ್ಟಿ, ಕೃತಿಕಾ, ಪಂಚಾಯತಿ ಸದಸ್ಯ ಚೌಡಮ್ಮ ಹಾಗೂ ರೈತರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







