Home News ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಬಾಲಕೃಷ್ಣನ ಲೀಲೆಗಳನ್ನು ತಿಳಿಸುವ ಅಲಂಕಾರ

ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಬಾಲಕೃಷ್ಣನ ಲೀಲೆಗಳನ್ನು ತಿಳಿಸುವ ಅಲಂಕಾರ

0

ಶಿಡ್ಲಘಟ್ಟದ ಗೌಡರಬೀದಿಯ ಮಂಜುನಾಥ್‌ ಅವರ ಮನೆಯಲ್ಲಿ ಗೋಕುಲದ ಬಾಲಕೃಷ್ಣನ ಲೀಲೆಗಳನ್ನು ತಿಳಿಸುವ ರೀತಿಯಲ್ಲಿ ಅಲಂಕಾರವನ್ನು ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮಾಡಲಾಗಿತ್ತು.
ಶಿಡ್ಲಘಟ್ಟದ ಗೌಡರಬೀದಿಯ ಮಂಜುನಾಥ್‌ ಅವರ ಮನೆಯಲ್ಲಿ ಗೋಕುಲದ ಬಾಲಕೃಷ್ಣನ ಲೀಲೆಗಳನ್ನು ತಿಳಿಸುವ ರೀತಿಯಲ್ಲಿ ಅಲಂಕಾರವನ್ನು ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮಾಡಲಾಗಿತ್ತು.
ಗೋಪಿಕೆಯರನ್ನು ಗೋಳುಹೊಯ್ದುಕೊಳ್ಳುವ ಕೃಷ್ಣ. ಅವರ ಬೈಗುಳವನ್ನು ಆಸ್ವಾದಿಸುವ ಕೃಷ್ಣ. ಕೃಷ್ಣನ ಬಗ್ಗೆ ಅವರೂ ಅಷ್ಟೆ. ಸಿಟ್ಟಾದಂತೆ ತೋರಿದರೂ ಅದು ಹುಸಿಮುನಿಸು. ಅವನ ತುಂಟತನದಿಂದ ಒಳಗೊಳಗೇ ಖುಷಿ. ಈ ಖುಷಿಯನ್ನು ಹಾಗೇ ಇಡು ದೇವರೆ ಎಂದು ಪ್ರಾರ್ಥಿಸುವಂತಿದ್ದ ಅವರ ಮನಃಸ್ಥಿತಿಯನ್ನು ಪ್ರದರ್ಶಿಸುವ ಪ್ರತಿಕೃತಿಯನ್ನು ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಪಟ್ಟಣದ ಗೌಡರಬೀದಿಯ ಮಂಜುನಾಥ್‌ ಅವರ ಮನೆಯಲ್ಲಿ ಸುಂದರವಾಗಿ ರೂಪಿಸಲಾಗಿತ್ತು.
ಪುತಿನ ಅವರು “ಗೋಕುಲ ನಿರ್ಗಮನ” ನಾಟಕದಲ್ಲಿ, ಕೃಷ್ಣನಿಲ್ಲದ ಗೋಕುಲ ಆತನ ನೆನಪನ್ನೇ ಮಿಡಿಯುತ್ತಿರುವ ಸನ್ನಿವೇಶವನ್ನು ‘ಇದ್ದುದು ದಿಟ, ಅವನೊಲಿದುದು ದಿಟ, ನಾವು ನಲಿದುದು ದಿಟ, ಬಹ ನೆಚ್ಚು ದಿಟ’ ಎಂಬ ವರ್ಣನೆಯಂತೆ ಎಂದೆಂದೂ ಮುಗಿಯದ ವಸಂತಕ್ಕಾಗಿ ನಿರೀಕ್ಷಿಸುತ್ತಲೇ ಕೃಷ್ಣನನ್ನು ಬೀಳ್ಕೊಟ್ಟ ಗೋಕುಲ, ಅದರೊಳಗೆ ಬದುಕಿದ್ದ ರಾಧೆ, ಅವಳ ಗೆಳತಿಯರು -ಇವರೆಲ್ಲರನ್ನೂ ಸಚಿತ್ರವಾಗಿ ರೂಪಿಸಲಾಗಿತ್ತು.
ಗೋಕುಲದ ನದಿ, ಮರ ಗಿಡ, ಕೃಷ್ಣನ ಪ್ರೀತಿಯ ಬೆಣ್ಣೆ ಮತ್ತು ಸಿಹಿತಿನಿಸುಗಳೊಂದಿಗೆ ನೂರೆಂಟು ವಿಧದ ತಿನಿಸುಗಳನ್ನಿಟ್ಟು ಪೂಜಿಸಲಾಯಿತು. ಸುತ್ತಮುತ್ತಲಿನ ಮನೆಗಳವರು, ಮಕ್ಕಳು ಬಂದು ಭಾಗವತದ ಪ್ರಮುಖ ಘಟ್ಟ ಹಾಗೂ ಬಾಲಕೃಷ್ಣನ ಬಾಲ ಲೀಲೆಗಳನ್ನು ಕಂಡು ಪ್ರಸಾದವನ್ನು ಪಡೆದರು.
‘ಸುಮಾರು ಹದಿನೈದು ವರ್ಷಗಳಿಂದ ಕೃಷ್ಣ ಜನ್ಮಾಷ್ಠಮಿಯನ್ನು ವಿಶೇಷವಾಗಿ ಆಚರಿಸಿಕೊಂಡು ಬರುತ್ತಿದ್ದು, ಒಂದೊಂದು ವರ್ಷ ಒಂದೊಂದು ಕೃಷ್ಣ ಮಹಿಮೆಯನ್ನು ವ್ಯಕ್ತವಾಗುವಂತೆ ಅಲಂಕಾರ ಮಾಡುತ್ತೇವೆ. ಈ ಬಾರಿ ಕೃಷ್ಣನು ಗೋಕುಲದಲ್ಲಿ ಗೋಪಿಕಾ ಸ್ತ್ರೀಯರನ್ನು ಗೋಳು ಹೊಯ್ದುಕೊಳ್ಳುತ್ತಾ ಅವರೆಲ್ಲರ ಪ್ರೀತಿಪಾತ್ರನಾಗುವುದನ್ನು ಪ್ರದರ್ಶಿಸಿದ್ದೇವೆ. ಮಕ್ಕಳಿಗೆ ಈ ರೀತಿಯ ಪ್ರತಿಕೃತಿಗಳ ಮೂಲಕ ಶ್ರೀಕೃಷ್ಣನ ಲೀಲೆಗಳು ಹಾಗೂ ಭಾಗವತದ ಕಥೆಯನ್ನು ತಿಳಿಸುವ ಪ್ರಯತ್ನವನ್ನು ಮಾಡಿದ್ದೇವೆ’ ಎಂದು ಗೌಡರಬೀದಿಯ ಮಂಜುನಾಥ್‌ ತಿಳಿಸಿದರು.

error: Content is protected !!