ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಅವರ ನೇತೃತ್ವದಲ್ಲಿ ಶಾಶ್ವತ ನೀರಾವರಿ ಹೋರಾಟವನ್ನು ಬೆಂಬಲಿಸಲು ಗುರುವಾರ ನಗರದಿಂದ ಸಾವಿರಾರು ಬೈಕ್ಗಳಲ್ಲಿ ಜನರು ಚಿಕ್ಕಬಳ್ಳಾಪುರದ ಕಡೆಗೆ ತೆರಳಿದರು.

ನಗರದ ದಿಬ್ಬೂರಹಳ್ಳಿ ರಸ್ತೆಯಿಂದ, ಟಿ.ಬಿ.ರಸ್ತೆ, ಕಾಂಗ್ರೆಸ್ ಭವನ ರಸ್ತೆ, ಉಲ್ಲೂರುಪೇಟೆ, ಬೈಪಾಸ್ ರಸ್ತೆಯನ್ನು ಹಾದು ಚಿಕ್ಕಬಳ್ಳಾಪುರದ ರಸ್ತೆಯಲ್ಲಿ ಬೈಕ್ ರ್ಯಾಲಿಯನ್ನು ಮುನ್ನಡೆಸಲಾಯಿತು. ಹಂಡಿಗನಾಳ ಗ್ರಾಮದಲ್ಲಿ ಬೈಕ್ ರ್ಯಾಲಿಗೆ ವಿಶೇಷ ಸ್ವಾಗತವನ್ನು ಏರ್ಪಡಿಸಲಾಗಿತ್ತು.