24.1 C
Sidlaghatta
Wednesday, October 29, 2025

ಕೊತ್ತನೂರು ಭೂನೀಳಾ ಸಮೇತ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ತಿರುಕಲ್ಯಾಣ ಮಹೋತ್ಸವ

- Advertisement -
- Advertisement -

ತಾಲ್ಲೂಕಿನ ಕೊತ್ತನೂರು ಗ್ರಾಮದ ಭೂನೀಳಾ ಸಮೇತ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಈಚೆಗೆ ಮಹಾ ಸುದರ್ಶನ ಹೋಮ ಹಾಗೂ ತಿರುಕಲ್ಯಾಣ ಮಹೋತ್ಸವ ಕಾರ್ಯಕ್ರಮವನ್ನು ಬಹಳ ವಿಜೃಂಭಣೆಯಿಂದ ನಡೆಸಲಾಯಿತು.
ತಾಲ್ಲೂಕಿನ ಕೊತ್ತನೂರು ಗ್ರಾಮದಲ್ಲಿನ ದೇವಾಲಯದಲ್ಲಿ ಎರಡು ದಿನಗಳ ಕಾಲ ನಾನಾ ವಿದವಾದ ಪೂಜಾ ಕಾರ್ಯಗಳನ್ನು ಕೈಗೊಂಡಿದ್ದು ಮಹಾ ಸುದರ್ಶನ ಹೋಮ ಹಾಗೂ ತಿರುಕಲ್ಯಾಣ ಮಹೋತ್ಸವವನ್ನು ನಡೆಸಲಾಯಿತು. ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಮಂದಿ ಭಕ್ತರು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ದೇವಾಲಯದ ಪ್ರಧಾನ ಅರ್ಚಕ ಚನ್ನಕೇಶವಾಚಾರ್ ಹಾಗೂ ತಂಡದವರಿಂದ ಮುಂಜಾನೆ ಸೂರ್ಯೋದಯಕ್ಕೂ ಮುನ್ನವೇ ಸ್ವಸ್ತಿವಾಚನ, ಅನುಜ್ಞೆ, ವಿಶ್ವಕ್ಷೇನ ಪೂಜೆ, ಭಗವತ್ ವಾಸುದೇವ ಪುಣ್ಯಾಹವಾಚನ, ರಕ್ಷಾ ಬಂಧನ, ಕಳಶಾರಾಧನೆ ಮಾಡಿ ನಂತರ ಶ್ರೀ ಮಹಾ ಸುದರ್ಶನ ಹೋಮವನ್ನು ನಡೆಸಿದರು. ಆ ನಂತರ ಸುಪ್ರಭಾತ ಸೇವೆ, ವೇದ ಪಾರಾಯಣ, ವಿಶೇಷ ಫಲಪಂಚಾಮೃತಾಭಿಷೇಕ, ಅಲಂಕಾರ ಸೇವೆಯನ್ನು ಮಾಡಿ ಭೂನೀಳಾ ಸಮೇತ ಚನ್ನಕೇಶವ ಸ್ವಾಮಿಗೆ ತಿರು ಕಲ್ಯಾಣ ಮಹೋತ್ಸವವನ್ನು ನೆರವೇರಿಸಲಾಯಿತು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!