Home News ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

0

ತಾಲ್ಲೂಕು ಸವಿತಾ ಸಮಾಜ ಹಾಗೂ ತಾಲ್ಲೂಕು ಸವಿತಾ ಕಲಾವಿದರ ಸಂಘದ ವತಿಯಿಂದ ಮೂರನೇ ಶ್ರಾವಣ ಶನಿವಾರದ ಪ್ರಯುಕ್ತ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಪಟ್ಟಣದ ಅಶೋಕ ರಸ್ತೆಯಲ್ಲಿ ಅನಾದಿಕಾಲದಿಂದಲೂ ನೆಲೆಸಿರುವ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಅಭಿಷೇಕ, ವಿಶೇಷ ಹೂವಿನ ಅಲಂಕಾರ ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ನಡೆದಿದ್ದು ಸವಿತಾ ಸಮಾಜದ ಎಲ್ಲಾ ಮುಖಂಡರು ಯುವಕರು ಹಾಗು ಪಟ್ಟಣದ ನಾಗರೀಕರು ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಊರಿನ ಪ್ರಮುಖ ಬೀದಿಗಳಲ್ಲಿ ಮುತ್ತಿನ ಪಲ್ಲಕಿಯಲ್ಲಿ ಮಂಗಳವಾದ್ಯಗಳೊಂದಿಗೆ ಸ್ವಾಮಿಯ ಮೆರವಣಿಗೆ ಮಾಡಲಾಯಿತು.
ಸವಿತಾ ಸಮಾಜದ ತಾಲ್ಲೂಕು ಅಧ್ಯಕ್ಷ ಮುನಿಕೃಷ್ಣಪ್ಪ, ತಿಮ್ಮರಾಜು, ನಾಗಪ್ಪ, ಪ್ರೊ. ಆರ್ ಶ್ರೀನಿವಾಸ್, ಚಂದ್ರು, ರಮೇಶ್, ಬಾಲಕೃಷ್ಣ, ನಾರಾಯಣ ಸ್ವಾಮಿ, ಮುನಿಶಾಮಪ್ಪ, ಮತ್ತಿತರರು ಹಾಜರಿದ್ದರು.

error: Content is protected !!