ನಗರದ ಕ್ರೆಸೆಂಟ್ ಶಾಲೆಯಲ್ಲಿ ಶುಕ್ರವಾರ ‘ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ’ ದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಜಂತುಹುಳು ನಿವಾರಣಾ ಮಾತ್ರೆಗಳನ್ನು ನೀಡಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಅನಿಲ್ಕುಮಾರ್ ಮಾತನಾಡಿದರು.
ಜಂತುಹುಳು, ಕೊಕ್ಕೆಹುಳು, ಲಾಡಿಹುಳು, ಮುಂತಾದವುಗಳು ಮಕ್ಕಳ ಹೊಟ್ಟೆ ಸೇರಿದಾಗ ರಕ್ತಹೀನತೆ, ಅಪೌಷ್ಠಿಕತೆ ಮುಂತಾದ ರೋಗಕ್ಕೆ ಮಕ್ಕಳು ಸುಲಭವಾಗಿ ತುತ್ತಾಗುತ್ತಾರೆ. ಇದರಿಂದಾಗಿ ಮಕ್ಕಳ ಕಲಿಕಾ ಸಾಮರ್ಥ್ಯ ಕಡಿಮೆ ಆಗುತ್ತದೆ. ಇಂತಹ ರೋಗಗಳು ಬಾರದಂತೆ ಮಕ್ಕಳು ಜಾಗ್ರತೆ ವಹಿಸಬೇಕೆಂದು ಅವರು ತಿಳಿಸಿದರು.
ಜಂತುಹುಳು ಆಗದಂತೆ ಪ್ರತಿಯೊಬ್ಬರು ಶುಚಿತ್ವ ವಹಿಸಬೇಕು, ಉತ್ತಮ ಆಹಾರ ಮತ್ತು ಶುದ್ಧವಾದ ನೀರನ್ನು ಸೇವಿಸಬೇಕು ಹಾಗೂ ಆರೋಗ್ಯ ಇಲಾಖೆ ನೀಡಿದ ಮಾತ್ರೆಗಳನ್ನು ಸೇವಿಸಬೇಕು. ಊಟ ಆದ 30 ನಿಮಿಷಗಳ ನಂತರವಷ್ಟೆ ಮಕ್ಕಳಿಗೆ ಜಂತುಹುಳು ನಿವಾರಕ ಆಲ್ಬೆಂಡೊಜೋಲ್ ಮಾತ್ರೆಯುನ್ನು ಕುಡಿಸಬೇಕು. ಮಾತ್ರೆ ಕುಡಿದ ನಂತರ ಹೆಚ್ಚು ನೀರು ಕುಡಿಯುವಂತೆ ಮಕ್ಕಳಿಗೆ ತಿಳಿಸಬೇಕು. ಮಾತ್ರೆ ಕೊಡುವಾಗ ಶಿಕ್ಷಕರು ವೈಯಕ್ತಿಕ ಜವಾಬ್ದಾರಿ ತೆಗೆದುಕೊಂಡು ನಿರ್ವಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಉಚಿತವಾಗಿ ಕೊಡಮಾಡಿದ ಜಂತು ಹುಳು ನಿವಾರಣಾ ಮಾತ್ರೆಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಕ್ರೆಸೆಂಟ್ ಶಾಲೆಯ ಕಾರ್ಯದರ್ಶಿ ತಮೀಮ್ ಅನ್ಸಾರಿ, ಆರೋಗ್ಯ ಇಲಾಖೆಯ ಡಾ.ವಿಜಯ್, ಡಾ.ವೈಶಾಲಿ, ಡಾ.ಭರತ್, ಡಾ.ರಾಘವೇಂದ್ರ. ಆರೋಗ್ಯ ಮೇಲ್ವಿಚಾರಕಿಯರಾದ ಮುನಿರತ್ನಮ್ಮ, ವಿಜಯಮ್ಮ ಹಾಜರಿದ್ದರು.
- Advertisement -
- Advertisement -
- Advertisement -