ಕ್ಲಿಷ್ಟಕರ ವಿಷಯಗಳನ್ನು ತರಗತಿಯಲ್ಲಿ ಬೋಧಿಸುವುದು ಸವಾಲಾಗಿದೆ

- Advertisement -
- Advertisement -

ಗಣಿತ ವಿಜ್ಞಾನದಂತಹ ಕ್ಲಿಷ್ಟಕರ ವಿಷಯಗಳನ್ನು ತರಗತಿಯಲ್ಲಿ ಪರಿಣಾಮಕಾರಿಯಾಗಿ ಬೋಧಿಸುವುದು ಒಂದು ಸವಾಲಾಗಿದೆ. ಇದನ್ನು ಯಶಸ್ವಿಯಾಗಿ ನಿರ್ವಹಿಸಿದರೆ ಪ್ರಾಥಮಿಕ ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರಲು ಸಾಧ್ಯ ಎಂದು ತಾಲ್ಲೂಕಿನ ದ್ಯಾವಪ್ಪನಗುಡಿ ಸರ್ಕಾರಿ ಪ್ರೌಢಶಾಲೆ ಪ್ರಭಾರಿ ಮುಖ್ಯ ಶಿಕ್ಷಕ ಎಂ.ಪಿ.ಜೀವಂದರ್ ಕುಮಾರ್ ತಿಳಿಸಿದರು.
ತಾಲ್ಲೂಕಿನ ಅಬ್ಲೂಡು ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಹೊಸ ಶಿಕ್ಷಣ ನೀತಿ ಮಾರ್ಗದರ್ಶಿ ಸಭೆಯಲ್ಲಿ ಅವರು ಮಾತನಾಡಿದರು.
ಸಮುದಾಯದ ಭಾಗವಹಿಸುವಿಕೆ ಕೂಡ ಶಾಲಾ ಚಟುವಟಿಕೆಗೆ ಪ್ರೋತ್ಸಾಹ ನೀಡುತ್ತದೆ ಎಂದರು. ಅಬ್ಲೂಡು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜಯಶ್ರೀ ಮಾತನಾಡಿ, ಸಂವಿಧಾನಾತ್ಮಕ ಆಶಯಗಳನ್ನು ಜಾರಿಗೆ ತರಲು ಶಿಕ್ಷಣದ ಸಾರ್ವತ್ರೀಕರಣವಾಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರದ ಪ್ರಯತ್ನದೊಂದಿಗೆ ಸಮುದಾಯವೂ ಭಾಗವಹಿಸಬೇಕೆಂದು ಹೇಳಿದರು.
ಕಾರ್ಯಕ್ರಮಕ್ಕೆ ಮುನ್ನ ಶಾಲಾ ವಿದ್ಯಾರ್ಥಿಗಳಿಂದ ಮೆರವಣಿಗೆ ನಡೆಸಲಾಯಿತು. ಅಬ್ಲೂಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚನ್ನಕೃಷ್ಣಪ್ಪ, ಸಿ.ಆರ್.ಪಿ.ಶಂಕರಾಚಾರಿ, ಅಬ್ಲೂಡು ಕ್ಲಸ್ಟರ್ ವ್ಯಾಪ್ತಿಯ ಎಲ್ಲಾ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!